IPL 2025: ಆರ್ಸಿಬಿಗೆ ಕಪ್ ಗೆದ್ದುಕೊಡಬಲ್ಲ ನಾಲ್ವರು ಸ್ಟಾರ್ಗಳನ್ನು ಆರಿಸಿದ ವಿಜಯ್ ಮಲ್ಯ!
Vijay mallya on Match winners for RCB: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರ ನಡುವೆ ಈ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಅವರ ಸಂದರ್ಶನವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.

ಆರ್ಸಿಬಿಗೆ ತಮ್ಮ ಕನಸಿನ ಆಟಗಾರರನ್ನು ಆರಿಸಿದ ವಿಜಯ್ ಮಲ್ಯ.

ನವದೆಹಲಿ: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜೂನ್ 3 (ಮಂಗಳವಾರ) ರಂದು ನಡೆದಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡವನ್ನು 6 ರನ್ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB), ಚೊಚ್ಚಲ ಟ್ರೋಫಿ ಗೆದ್ದಿದೆ. ಇದರ ಹೊರತಾಗಿಯೂ ತಂಡಕ್ಕೆ ಚಾಂಪಿಯನ್ ಪಟ್ಟ ದಕ್ಕಿಸಿಕೊಡಬಲ್ಲ ನಾಲ್ವರು ಆಟಗಾರರನ್ನು ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ (Vijay Malya) ಆಯ್ಕೆ ಮಾಡಿದ್ದಾರೆ.
ವಿಜಯ್ ಮಲ್ಯ ಅವರು ತಮ್ಮ ಕನಸಿನ ತಂಡದಲ್ಲಿ ಮುಂಬೈ ಇಂಡಿಯನ್ಸ್ನ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ, ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್, ಕನ್ನಡಿಗ ಕೆಎಲ್ ರಾಹುಲ್ ಹಾಗೂ ಲಖನೌ ಸೂಪರ್ ಜಯಂಟ್ಸ್ ತಂಡದ ನಾಯಕ ರಿಷಭ್ ಪಂತ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಇರಬೇಕಿತ್ತು ಎಂದು ಇತ್ತೀಚೆಗೆ ನೀಡಿದ್ದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
ಬೆಂಗಳೂರು ಫ್ರಾಂಚೈಸಿ ವಿಜಯ್ ಮಲ್ಯಗೆ ಮೊದಲ ಆಯ್ಕೆಯಾಗಿರಲಿಲ್ಲ: ಲಲಿತ್ ಮೋದಿ!
ಆರ್ಸಿಬಿ ತಂಡದಲ್ಲಿ ಈ ಆಟಗಾರರು ಇರಬೇಕಿತ್ತು: ವಿಜಯ್ ಮಲ್ಯ
ರಾಜ್ ಶಮಾನಿ ಅವರ ಯುಟ್ಯೂಬ್ ಚಾನೆಲ್ಗೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿದ್ದ ಬೆಂಗಳೂರು ಫ್ರಾಂಚೈಸಿಯ ಮಾಜಿ ಮಾಲೀಕ ವಿಜಯ್ ಮಲ್ಯ ತಮ್ಮ ಕನಸಿನ ತಂಡದ ಕುರಿತು ಗಮನ ಸೆಳೆದಿದ್ದಾರೆ.
"ನಾನು ಕಂಡ ಕನಸು ನಿಜವಾದರೆ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಅವರನ್ನು ಆರ್ಸಿಬಿ ತಂಡಕ್ಕೆ ಕರೆತರುತ್ತಿದ್ದೆ. ಈ ನಾಲ್ವರು ಆಟಗಾರರು ತಂಡದಲ್ಲಿ ಇದ್ದಿದ್ದರೆ, ಟ್ರೋಫಿ ಗೆಲ್ಲಲು ನಾನು ಬೇರೆ ಆಟಗಾರರ ಕಡೆ ಗಮನಹರಿಸುತ್ತಿರಲಿಲ್ಲ," ಎಂದು ವಿಜಯ್ ಮಲ್ಯ ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಖರೀದಿಸಲು ಬಲವಾದ ಕಾರಣ ತಿಳಿಸಿದ ವಿಜಯ್ ಮಲ್ಯ!
ಕನ್ನಡಿಗ ಕೆಎಲ್ ರಾಹುಲ್ 2016ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದರು. ಆದರೆ ಉಳಿದ ಆಟಗಾರರು ಆರ್ಸಿಬಿ ತಂಡದ ಪರ ಒಂದೇ ಒಂದು ಆವೃತ್ತಿಯಲ್ಲೂ ಆಡಿಲ್ಲ. ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಂಡ ನಂತರ ಆ ತಂಡದ ಮಾಲೀಕರು ಆತನನ್ನು ಹರಾಜು ಪ್ರಕ್ರಿಯೆಗೆ ಬಿಟ್ಟುಕೊಟ್ಟಿಲ್ಲ. 2025ರ ಐಪಿಎಲ್ ಟೂರ್ನಿಯ ಮೆಗಾ ಹರಾಜಿಗೂ ಮುನ್ನವೇ ಸ್ಫೋಟಕ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ಫ್ರಾಂಚೈಸಿ ತಂಡದಲ್ಲೇ ಉಳಿಸಿಕೊಂಡಿತ್ತು. ಇನ್ನು ಐಪಿಎಲ್ ಇತಿಹಾಸದಲ್ಲೇ ದಾಖಲೆ ಮೊತ್ತ (27.5 ಕೋಟಿ)ಕ್ಕೆ ಖರೀದಿಯಾದ ರಿಷಭ್ ಪಂತ್, ಲಖನೌ ಸೂಪರ್ ಜಯಂಟ್ಸ್ ತಂಡದ ನಾಯಕತ್ವ ನಿಭಾಯಿಸಿದ್ದರು. ಇನ್ನು ಕನ್ನಡಿಗ ಕೆಎಲ್ ರಾಹುಲ್ 14 ಕೋಟಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿಕೊಂಡರು.
Vijay Mallya: ನಾನು ಕಳ್ಳ ಅಲ್ಲ... ಆರೋಪಗಳಿಗೆ ಪಾಡ್ಕಾಸ್ಟ್ನಲ್ಲಿ ವಿಜಯ್ ಮಲ್ಯ ಉತ್ತರ
ಟ್ರೋಫಿ ಗೆಲ್ಲುವ ಕನಸು ಕಂಡಿದ್ದೆ: ವಿಜಯ್ ಮಲ್ಯ
2008ರ ಐಪಿಎಲ್ ಟೂರ್ನಿಯ ಚೊಚ್ಚಲ ಆವೃತ್ತಿಯ ಹರಾಜಿನಲ್ಲಿ ವಿರಾಟ್ ಕೊಹ್ಲಿಯನ್ನು ಖರೀದಿ ಹಾಗೂ ಟ್ರೋಫಿ ಗೆಲ್ಲುವ ಕುರಿತು ವಿಜಯ್ ಮಲ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
"ಐಪಿಎಲ್ ಟೂರ್ನಿಯ ಚೊಚ್ಚಲ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಖರೀದಿಸಿದ್ದಾಗಲೇ ಟ್ರೋಫಿಯನ್ನು ಬೆಂಗಳೂರಿಗೆ ತರಬೇಕು ಎಂಬ ಕನಸು ಕಂಡಿದ್ದೆ," ಎಂದು ಮದ್ಯದ ದೊರೆ ವಿಜಯ್ ಮಲ್ಯ ಹೇಳಿದ್ದಾರೆ.
"ಮೆಗಾ ಹರಾಜಿನಲ್ಲಿ ಯುವಕನಾಗಿ ಈಗ ದಿಗ್ಗಜ ಆಟಗಾರನಾಗಿರುವ ವಿರಾಟ್ ಕೊಹ್ಲಿಯನ್ನು ಖರೀದಿಸಿದ್ದು ಹೆಮ್ಮೆಯ ಭಾವನೆ ಮೂಡಿಸಿತ್ತು. ಅದಕ್ಕೆ ತಕ್ಕಂತೆ ಅವರು 18 ವರ್ಷಗಳಿಂದಲೂ ತಂಡಕ್ಕೆ ನಿಷ್ಠರಾಗಿದ್ದಾರೆ," ಎಂದು ಅವರು ತಿಳಿಸಿದ್ದಾರೆ.