ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಎರಡನೇ ಟೆಸ್ಟ್‌ಗೂ ಮುನ್ನ ಇಂಗ್ಲೆಂಡ್‌ನಿಂದ ತವರಿಗೆ ಮರಳಿದ ಟೀಮ್‌ ಇಂಡಿಯಾ ಯುವ ವೇಗಿ?

IND vs ENG 2nd Test: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೇಗದ ಬೌಲರ್ ಹರ್ಷಿತ್ ರಾಣಾ ಅವರನ್ನು ಭಾರತ ತಂಡದಿಂದ ಬಿಡುಗಡೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ತಂಡಕ್ಕೆ ಸೇರಿಸಲಾಗಿತ್ತು, ಆದರೆ ಈಗ ಅವರು ಭಾರತ ಎ ತಂಡಕ್ಕೆ ಮರಳಲಿದ್ದಾರೆ.

IND vs ENG: ಇಂಗ್ಲೆಂಡ್‌ನಿಂದ ತವರಿಗೆ ಮರಳಿದ ಹರ್ಷಿತ್‌ ರಾಣಾ?

ಭಾರತಕ್ಕೆ ಮರಳಿದ ಹರ್ಷಿತ್‌ ರಾಣಾ.

Profile Ramesh Kote Jun 25, 2025 8:16 PM

ಲಂಡನ್: ಇಂಗ್ಲೆಂಡ್ (England) ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ(IND vs ENG) ಎರಡನೇ ಪಂದ್ಯಕ್ಕೂ ಮುನ್ನ ಭಾರತ ತಂಡದ ವೇಗಿ ಹರ್ಷಿತ್ ರಾಣಾ (Harshit Rana) ಅವರನ್ನು ಟೆಸ್ಟ್ ತಂಡದಿಂದ ಬಿಡುಗಡೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿತ್ತು ಆದರೆ ಅವರು ತಮ್ಮ ತಂಡದ ಉಳಿದವರೊಂದಿಗೆ ಬರ್ಮಿಂಗ್‌ಹ್ಯಾಮ್‌ಗೆ ಹೋಗುವ ಬಸ್‌ನಲ್ಲಿ ಕಾಣಿಸಿಕೊಂಡಿಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿಯಲ್ಲಿ ಈ ಹೇಳಿಕೆ ನೀಡಲಾಗಿದೆ. ಹರ್ಷಿತ್‌ ರಾಣಾ ಭಾರತ ಎ ತಂಡದ ಭಾಗವಾಗಿದ್ದರು. ಇಂಗ್ಲೆಂಡ್ ಲಯನ್ಸ್ ವಿರುದ್ಧದ ಸರಣಿಯ ನಂತರ ಉಳಿದ ಆಟಗಾರರು ಭಾರತಕ್ಕೆ ಮರಳಿದ್ದರು. ಆದರೆ, ಹರ್ಷಿತ್‌ ಟೀಮ್‌ ಇಂಡಿಯಾ ಜೊತೆ ಇದ್ದರು.

ಭಾರತ ತಂಡವು ಸ್ಥಳೀಯ ಕಾಲಮಾನ ಬೆಳಿಗ್ಗೆ 11:30 ಕ್ಕೆ ಲೀಡ್ಸ್‌ನಿಂದ ಬಸ್‌ನಲ್ಲಿ ಹೊರಟಿತು ಮತ್ತು ಮೂರು ಗಂಟೆಗಳಲ್ಲಿ ಬರ್ಮಿಂಗ್‌ಹ್ಯಾಮ್ ತಲುಪುವ ನಿರೀಕ್ಷೆಯಿದೆ. ಟೀಮ್‌ ಇಂಡಿಯಾ ಇದೀಗ ಮುಂದಿನ ಎರಡು ದಿನಗಳವರೆಗೆ ವಿಶ್ರಾಂತಿ ಪಡೆಯಲಿದೆ ಮತ್ತು ನಂತರ ಮತ್ತೆ ಅಭ್ಯಾಸವನ್ನು ಪ್ರಾರಂಭಿಸಲಿದೆ. ಎರಡನೇ ಟೆಸ್ಟ್ ಪಂದ್ಯ ಪ್ರಾರಂಭವಾಗುವ ಮುನ್ನ ಭಾರತ ಸರಣಿಯನ್ನು ಸಮಬಲಗೊಳಿಸಲು ಮತ್ತು ಹೆಡಿಂಗ್ಲಿಯಲ್ಲಿನ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಲಿದೆ. ಆಂಡರ್ಸನ್ ತೆಂಡೂಲ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಜುಲೈ 2 ರಂದು ಬರ್ಮಿಂಗ್‌ಹ್ಯಾಮ್‌ಗೆ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

IND vs ENG: ಎರಡನೇ ಟೆಸ್ಟ್‌ನಲ್ಲಿ ಕುಲ್ದೀಪ್ ಯಾದವ್‌ಗೆ ಸ್ಥಾನ ನೀಡಿ ಎಂದ ಸುನೀಲ್ ಗವಾಸ್ಕರ್!

ಬಿಸಿಸಿಐ ಮೂಲಗಳು ಹೇಳಿದ್ದೇನು?

"ಹರ್ಷಿತ್ ರಾಣಾ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಜುಲೈ 4 ರಂದು ಪ್ರಾರಂಭವಾಗುವ ಎರಡನೇ ಟೆಸ್ಟ್ ಪಂದ್ಯದ ನಿಮಿತ್ತ ಅವರು ಭಾರತ ತಂಡದೊಂದಿಗೆ ಬರ್ಮಿಂಗ್‌ಹ್ಯಾಮ್‌ಗೆ ಪ್ರಯಾಣಿಸಿಲ್ಲ," ಎಂದು ಹೆಸರು ಬಹಿರಂಗಪಡಿಸಲು ಬಯಸದ ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.

ಹೆಡ್‌ ಕೋಚ್‌ ಗೌತಮ್‌ ಗಂಭೀರ್ ಸುಳಿವು

"ಹರ್ಷಿತ್ ರಾಣಾ ಬಗ್ಗೆ ನಾನು ಆಯ್ಕೆದಾರರ ಮುಖ್ಯಸ್ಥರೊಂದಿಗೆ ಚರ್ಚಿಸುತ್ತೇನೆ. ಕೆಲವು ತೊಂದರೆಗಳಿಂದಾಗಿ ಅವರನ್ನು ಇಂಗ್ಲೆಂಡ್‌ನಲ್ಲಿ ಉಳಿಯುವಂತೆ ತಡೆಹಿಡಿಯಲಾಗಿತ್ತು. ಆದರೆ, ಎಲ್ಲವೂ ಚೆನ್ನಾಗಿದೆ. ನಾನು ಚರ್ಚಿಸುತ್ತೇನೆ ಮತ್ತು ನಂತರ ನಾವು ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ," ಎಂದು ಪಂದ್ಯದ ಬಳಿಕ ಹೆಡ್‌ ಕೋಚ್‌ ತಿಳಿಸಿದ್ದರು.

IND vs ENG: ಭಾರತ ತಂಡದ ಸೋಲಿಗೆ ಪ್ರಮುಖ ಕಾರಣಗಳು ಹೀಗಿದೆ

ಹರ್ಷಿತ್ ರಾಣಾ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಅಲ್ಲಿ ಅವರು ಆಡಿದ್ದ ಎರಡು ಟೆಸ್ಟ್‌ ಪಂದ್ಯಗಳಲ್ಲಿ 4 ವಿಕೆಟ್‌ಗಳನ್ನು ಕಬಳಿಸಿದ್ದರು. ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡದಲ್ಲಿಯೂ ಅವರು ಇದ್ದರು. ಹೆಡಿಂಗ್ಲೆ ಟೆಸ್ಟ್‌ನಲ್ಲಿ ಭಾರತದ ಸೋಲು ಎಲ್ಲರ ಗಮನ ಸೆಳೆದಿದೆ. ಟೆಸ್ಟ್ ಇತಿಹಾಸದಲ್ಲಿ ಐದು ಶತಕಗಳನ್ನು ಗಳಿಸಿದರೂ ತಂಡವೊಂದು ಪಂದ್ಯವನ್ನು ಸೋತಿದ್ದು ಇದೇ ಮೊದಲು. ಈ ಪಂದ್ಯದಲ್ಲಿ ಭಾರತ ಒಟ್ಟು 835 ರನ್‌ಗಳನ್ನು ದಾಖಲಿಸಿತ್ತು ಮತ್ತು ಐದು ಬ್ಯಾಟ್ಸ್‌ಮನ್‌ಗಳು ಶತಕಗಳನ್ನು ಗಳಿಸಿದ್ದರು. ಇದರ ಹೊರತಾಗಿಯೂ ತಂಡವು ಸೋಲನ್ನು ಎದುರಿಸಬೇಕಾಯಿತು.