IND vs NZ: ಅರ್ಷದೀಪ್ ಸಿಂಗ್ಗೆ ಅವಕಾಶ ನೀಡದ ಗೌತಮ್ ಗಂಭೀರ್ ವಿರುದ್ಧ ಫ್ಯಾನ್ಸ್ ಕಿಡಿ!
ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಏಕದಿನ ಪಂದ್ಯದ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಯುವ ವೇಗಿ ಅರ್ಷದೀಪ್ ಸಿಂಗ್ಗೆ ಅವಕಾಶ ನೀಡದ ಬಗ್ಗೆ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ವಿರುದ್ಧ ಫ್ಯಾನ್ಸ್ ಕಿಡಿಕಾರಿದ್ದಾರೆ. ಭಾರತ ತಂಡದಲ್ಲಿ ಪಕ್ಷಪಾತ ಧೋರಣೆಯನ್ನು ಅನುಸರಿಸಲಾಗುತ್ತಿದೆ ರೆಂದು ಅಭಮಾನಿಗಳು ಗುಡುಗಿದ್ದಾರೆ.
ಗೌತಮ್ ಗಂಭೀರ್ ವಿರುದ್ಧ ಫ್ಯಾನ್ಸ್ ಕಿಡಿ. -
ವಡೋದರ: ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಏಕದಿನ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ (India's Playing XI) ಯುವ ವೇಗಿ ಅರ್ಷದೀಪ್ ಸಿಂಗ್ಗೆ (Arshdeep Singh) ಅವಕಾಶ ನೀಡದೆ, ಹರ್ಷಿತ್ ರಾಣಾಗೆ (Harshit Rana) ಚಾನ್ಸ್ ನೀಡಿರುವ ಬಗ್ಗೆ ಅಭಿಮಾನಿಗಳು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಪಕ್ಷಪಾತ ಧೋರಣೆಯನ್ನು ಅನುಸರಿಸುತ್ತಿದ್ದಾರೆ ಎಂದು ಫ್ಯಾನ್ಸ್ ಗುಡುಗಿದ್ದಾರೆ. ಅಂದ ಹಾಗೆ ನಾಯಕ ಶುಭಮನ್ ಗಿಲ್ ಹಾಗೂ ಉಪ ನಾಯಕ ಶ್ರೇಯಸ್ ಅಯ್ಯರ್ ಪ್ರತ್ಯೇಕ ಗಾಯಗಳಿಂದ ಗುಣಮುಖರಾಗಿ ಇದೀಗ ಭಾರತ ತಂಡಕ್ಕೆ ಮರಳಿದ್ದಾರೆ.
ಭಾರತ ತಂಡದ ಪ್ಲೇಯಿಂಗ್ XIನ ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹ್ಮಮ್ಮದ್ ಸಿರಾಜ್ ಹಾಗೂ ಹರ್ಷಿತ್ ರಾಣಾ ಆಡುತ್ತಿದ್ದಾರೆ. ಕಳೆದ ಸರಣಿಯಲ್ಲಿ ಅದ್ಭುತವಾಗಿ ಬೌಲ್ ಮಾಡಿದ್ದ ಅರ್ಷದೀಪ್ ಸಿಂಗ್ ಅವರನ್ನು ಮೊದಲನೇ ಪಂದ್ಯದಿಂದ ಕಡೆಗಣಿಸಲಾಗಿದೆ. ಇವರ ಜೊತೆಗೆ ಪ್ರಸಿಧ್ ಕೃಷ್ಣ ಅವರಿಗೂ ಚಾನ್ಸ್ ನೀಡಲಾಗಿದೆ. ಇದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಗೌತಮ್ ಗಂಭೀರ್ ಭಾರತ ತಂಡದಲ್ಲಿ ಪಕ್ಷಪಾತ ಧೋರಣೆಯನ್ನು ಅನುಸರಿಸುತ್ತಿದ್ದಾರೆಂದು ಅಭಿಮಾನಿಗಳು ದೂರಿದ್ದಾರೆ.
Varyun Chakravarthy: ಟಿ20 ವಿಶ್ವಕಪ್ ಭಾರತ ತಂಡಕ್ಕೆ ಕೀ ಆಟಗಾರನನ್ನು ಆರಿಸಿದ ಸೌರವ್ ಗಂಗೂಲಿ!
ದೇಶಿ ಕ್ರಿಕೆಟ್ನಲ್ಲಿ ಅರ್ಷ್ದೀಪ್ ಅವರ ಪ್ರದರ್ಶನವೂ ಅದ್ಭುತವಾಗಿತ್ತು. ನ್ಯೂಜಿಲೆಂಡ್ ಸರಣಿಗೂ ಮೊದಲು, ಅವರು ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಸಿಕ್ಕಿಂ ವಿರುದ್ಧ ಐದು ವಿಕೆಟ್ಗಳನ್ನು ಕಬಳಿಸಿದರು. ಇದು 50 ಓವರ್ಗಳ ಸ್ವರೂಪದಲ್ಲಿ ಅವರ ಲಯ ಮತ್ತು ನಿಯಂತ್ರಣವನ್ನು ಪ್ರದರ್ಶಿಸಿತು. ಅಭಿಮಾನಿಗಳು ಈ ನಿರ್ಧಾರವನ್ನು ಸ್ಪಷ್ಟವಾಗಿ ಪಕ್ಷಪಾತ ಎಂದು ಕರೆದರು, ಇದು ಇತ್ತೀಚಿನ ದಿನಗಳಲ್ಲಿ ಭಾರತೀಯ ಏಕದಿನ ತಂಡದ ಆಯ್ಕೆಗೆ ಸಂಬಂಧಿಸಿದಂತೆ ಹೆಚ್ಚಾಗಿ ಕೇಳಿಬರುವ ಪದವಾಗಿದೆ.
We Indians always cry about not having left-arm pacers like Starc or Boult. Arshdeep Singh has the potential to become India’s best left-armer in ODIs. Despite consistent performances, he’s frequently dropped from the playing XI. Why this repeated injustice? pic.twitter.com/JApCfY8ItU
— Mithun (@Mithun_1908) January 11, 2026
ಅರ್ಷದೀಪ್ ಸಿಂಗ್ ಉತ್ತಮ ಆಯ್ಕೆಯಾಗಿರುವಾಗ ಗೌತಮ್ ಗಂಭೀರ್, ರಾಣಾ ಅವರನ್ನು ಏಕೆ ಬೆಂಬಲಿಸುತ್ತಾರೆ ಎಂದು ಪ್ರಶ್ನಿಸಿ ಅನೇಕ ಅಭಿಮಾನಿಗಳು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ಟೀಕಿಸಿದ್ದಾರೆ. ರಾಣಾ ಕೆಲವು ಕೆಳ ಕ್ರಮಾಂಕದ ಬ್ಯಾಟಿಂಗ್ ಆಯ್ಕೆಗಳನ್ನು ನೀಡಿದರೆ, ವಿಮರ್ಶಕರು ಹೇಳುವಂತೆ ಅರ್ಶ್ದೀಪ್ ಅವರ ಅಂಕಿಅಂಶಗಳು ಮತ್ತು ಸ್ಥಿರತೆ ಅವರನ್ನು ಹೆಚ್ಚು ಅರ್ಹರನ್ನಾಗಿ ಮಾಡುತ್ತದೆ, ವಿಶೇಷವಾಗಿ ಹೊಸ ಚೆಂಡಿನೊಂದಿಗೆ ಶಿಸ್ತು ನಿರ್ಣಾಯಕವಾದಾಗ.
ಭಾರತ ತಂಡದ ಪ್ಲೇಯಿಂಗ್ XI
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ