IND vs AUS: ಶ್ರೇಯಸ್ ಅಯ್ಯರ್ ಗಾಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಬಿಸಿಸಿಐ!
Shreyas Iyer Injury Updates: ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಭಾರತ ತಂಡದ ಉಪ ನಾಯಕ ಶ್ರೇಯಸ್ ಅಯ್ಯರ್ ಅವರ ಬಗ್ಗೆ ಬಿಸಿಸಿಐ ಪ್ರತಿಕ್ರಿಯೆ ನೀಡಿವೆ. ಅವರ ಪಕ್ಕೆಲಬಿನ ಗಾಯಕ್ಕೆ ತುತ್ತಾಗಿದ್ದಾರೆ. ಗಾಯದ ತೀವ್ರತೆ ಬಗ್ಗೆ ತಿಳಿಯಲು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿವೆ.
ಮೂರನೇ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಗಾಯಕ್ಕೆ ತುತಾಗಿದ್ದಾರೆ. -
ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ (IND vs AUS) ವೇಳೆ ಭಾರತ ಕ್ರಿಕೆಟ್ ತಂಡದ ಉಪ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಗಾಯಗೊಂಡು ಮೈದಾನದಿಂದ ಹೊರನಡೆಯಬೇಕಾಯಿತು. ಆಸ್ಟ್ರೇಲಿಯಾ ಇನಿಂಗ್ಸ್ನ 34ನೇ ಓವರ್ನಲ್ಲಿ ಈ ಘಟನೆ ಸಂಭವಿಸಿದೆ. ಹರ್ಷಿತ್ ರಾಣಾ (Harshit Rana) ಅವರ ಓವರ್ನ ನಾಲ್ಕನೇ ಎಸೆತದಲ್ಲಿ ಆಸ್ಟ್ರೇಲಿಯಾದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಅಲೆಕ್ಸ್ ಕೇರಿ ಅವರ ಕ್ಯಾಚ್ ಪಡೆಯುವ ಸಲುವಾಗಿ ಶ್ರೇಯಸ್ ಅಯ್ಯರ್ ಅದ್ಭುತ ಪ್ರಯತ್ನವನ್ನು ನಡೆಸಿ ಯಶಸ್ವಿಯಾಗಿದ್ದರು. ಈ ವೇಳೆ ಅವರು ಗಾಯಕ್ಕೆ ತುತ್ತಾಗಿದ್ದರು. ಬಲಗೈ ಬ್ಯಾಟ್ಸ್ಮನ್ನ ಗಾಯದ ಬಗ್ಗೆ ಬಿಸಿಸಿಐ ಮಾಹಿತಿಯನ್ನು ನೀಡಿದೆ.
ಅಲೆಕ್ಸ್ ಕೇರಿ ಅವರು ಚೆಂಡನ್ನು ನೇರವಾಗಿ ಹೊಡೆಯಲು ಪ್ರಯತ್ನಿಸಿದ್ದರು, ಆದರೆ ಚೆಂಡು ಬ್ಯಾಟ್ಗೆ ಸರಿಯಾಗಿ ಸಿಗದ ಕಾರಣ ಡೀಪ್ ಪಾಯಿಂಟ್ನಿಂದ ಸ್ವಲ್ಪ ಮುಂದೆ ಗಾಳಿಯಲ್ಲಿ ಹಾರಿತ್ತು. ಈ ವೇಳೆ ಶ್ರೇಯಸ್ ಅಯ್ಯರ್ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಓಡಿ ಗಾಳಿಯಲ್ಲಿ ಹಾರಿ ಕ್ಯಾಚ್ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದರು. ಈ ವೇಳೆ ಅವರು ಎಡ ಭಾಗಕ್ಕೆ ಜಾರಿಬಿದ್ದರು ಹಾಗೂ ತಮ್ಮ ಪಕ್ಕೆಲುಬುಗಳನ್ನು ಹಿಡಿದು ನೋವಿನಿಂದ ನರಳುತ್ತಿದ್ದರು. ಈ ಮಧ್ಯೆ, ತಂಡದ ಫಿಸಿಯೊ ಮೈದಾನಕ್ಕೆ ಆಗಮಿಸಿದರು ಮತ್ತು ಗಾಯವನ್ನು ಪರೀಕ್ಷಿಸಿದ ನಂತರ, ಅಯ್ಯರ್ ಅವರನ್ನು ಮೈದಾನದಿಂದ ಹೊರಗೆ ಕರೆದೊಯ್ದರು.
IND vs AUS: ಜಸ್ಪ್ರೀತ್ ಬುಮ್ರಾ ಇನ್, ಮೊದಲ ಟಿ20ಐ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
ಶ್ರೇಯಸ್ ಅಯ್ಯರ್ ಅವರ ಗಾಯವು ಭಾರತಕ್ಕೆ ಒಂದು ಪ್ರಮುಖ ಕಳವಳವಾಗಿದೆ ಏಕೆಂದರೆ ಪ್ರವಾಸದಲ್ಲಿ ಈಗಾಗಲೇ ಹಲವು ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಟಾಸ್ ಸಮಯದಲ್ಲಿ ನಾಯಕ ಶುಭಮನ್ ಗಿಲ್ ಅವರು ನಿತೀಶ್ ಕುಮಾರ್ ರೆಡ್ಡಿ ಮತ್ತು ಅರ್ಷದೀಪ್ ಸಿಂಗ್ ಕೂಡ ಗಾಯದ ಕಾರಣದಿಂದಾಗಿ ಆಡುತ್ತಿಲ್ಲ ಎಂದು ಘೋಷಿಸಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ ನಿತೀಶ್ ತೊಡೆಯ ಸ್ನಾಯುವಿನ ಗಾಯದಿಂದ ಬಳಲುತ್ತಿದ್ದರು, ಆದರೆ ಹಿಂದಿನ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಈ ಆಟಗಾರರ ಅನುಪಸ್ಥಿತಿಯು ತಂಡದ ಸಂಯೋಜನೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
🚨 Shreyas Iyer has suffered ribcage injury but will be back by SA series.
— Rajiv (@Rajiv1841) October 25, 2025
- This guy never cared about himself but the team, always tries to give his all. Has always produced extraordinary moments as a fielder to contribute extra. God bless him❤️🧿pic.twitter.com/ZaHFerqKTw
ಶ್ರೇಯಸ್ ಅಯ್ಯರ್ ಗಾಯದ ಬಗ್ಗೆ ಬಿಸಿಸಿಐ ಹೇಳಿದ್ದೇನು?
ಅಯ್ಯರ್ ಅವರ ಗಾಯದ ಬಗ್ಗೆ ಬಿಸಿಸಿಐ ವಿವರವಾದ ಮಾಹಿತಿಯನ್ನು ಒದಗಿಸಿದೆ. "ಅಯ್ಯರ್ ಎಡ ಪಕ್ಕೆಲುಬಿನ ಗಾಯದಿಂದ ಬಳಲುತ್ತಿದ್ದಾರೆ. ಹೆಚ್ಚಿನ ಮೌಲ್ಯಮಾಪನಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದು ಗಾಯದ ತೀವ್ರತೆಯನ್ನು ಸೂಚಿಸುತ್ತದೆ ಮತ್ತು ವಿವರವಾದ ವೈದ್ಯಕೀಯ ಮೌಲ್ಯಮಾಪನದ ಅಗತ್ಯವಿದೆ," ಎಂದು ಬಿಸಿಸಿಐ ತಿಳಿಸಿದೆ. ತಂಡದ ಆಡಳಿತ ಮಂಡಳಿ ಮತ್ತು ಅಭಿಮಾನಿಗಳು ಈಗ ಅಯ್ಯರ್ ಅವರ ಚೇತರಿಕೆಗಾಗಿ ಆಶಿಸುತ್ತಿದ್ದಾರೆ.
IND vs AUS: ಅರ್ಧಶತಕ ಬಾರಿಸಿ ಕುಮಾರ ಸಂಗಕ್ಕಾರ ದಾಖಲೆ ಮುರಿದ ವಿರಾಟ್ ಕೊಹ್ಲಿ!
ಭಾರತ ತಂಡಕ್ಕೆ 9 ವಿಕೆಟ್ ಜಯ
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆತಿಥೇಯ ಆಸ್ಟ್ರೇಲಿಯಾ ತಂಡ ಉತ್ತಮ ಆರಂಭ ಕಂಡರೂ, ಹರ್ಷಿತ್ ರಾಣಾ ಅವರ ಮೋಡಿಗೆ ತತ್ತರಿಸಿ ಹೋಯಿತು. 46.4 ಓವರ್ ಗಳಿಗೆ 10 ವಿಕೆಟ್ ನಷ್ಟಕ್ಕೆ 236 ರನ್ ಕಲೆಹಾಕಲಷ್ಟೇ ಆಸೀಸ್ ತಂಡ ಶಕ್ತವಾಯಿತು. ಇನ್ನು ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ನಾಯಕ ಗಿಲ್ ಮತ್ತು ರೋಹಿತ್ ಶರ್ಮಾ ಅರ್ಧಶತಕದ ಉತ್ತಮ ಆರಂಭ ಒದಗಿಸಿದರು. ಗಿಲ್ ಔಟಾದ ಬಳಿಕ ಮೈದಾನಕ್ಕೆ ಬಂದ ಕೊಹ್ಲಿ, ರೋಹಿತ್ ಜೊತೆಗೂಡಿ 168 ರನ್ಗಳ ಅಮೋಘ ಜೊತೆಯಾಟ ನೀಡಿದರು. ಇದು ಈ ಸ್ಟಾರ್ ಜೋಡಿಯ 19ನೇ ಶತಕದ ಜೊತೆಯಾಟವಾಗಿದೆ. ಇನ್ನು ಆಸೀಸ್ ಬೌಲರ್ಗಳನ್ನು ಮೈದಾನದಲ್ಲಿ ನಿರಂತರವಾಗಿ ದಂಡಿಸಿದ ಈ ಜೋಡಿ 38.3 ಓವರ್ಗಳಲ್ಲಿ 237 ರನ್ ಪೇರಿಸಿ ಗೆಲುವನ್ನು ದಾಖಲಿಸಿತು.