ಧರ್ಮಶಾಲಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಧರ್ಮಶಾಲಾದ ಎಚ್ಪಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಪೈಪೋಟಿ ನಡೆಸಲಿದ್ದು, ಮಹತ್ವದ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮಹತ್ವದ ಬೆಳವಣಿಗೆ ಎಂಬಂತೆ ಈ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ವಿಕೆಟ್ಕೀಪರ್ ಬ್ಯಾಟ್ಸ್ಮನ್ ಜಿತೇಶ್ ಶರ್ಮಾ ಮುನ್ನಡೆಸುತ್ತಿದ್ದಾರೆ. ಎಂದಿನ ನಾಯಕ ರಜತ್ ಪಾಟಿದಾರ್ ಫಿಟ್ನೆಸ್ ಸಮಸ್ಯೆ ಎದುರಿಸುತ್ತಿರುವ ಕಾರಣ ಪಂಜಾಬ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.
ಟೂರ್ನಿಯಲ್ಲಿ ಆರಂಭಿಕ 6 ಪಂದ್ಯಗಳನ್ನು ಗೆದ್ದು ಅಬ್ಬರಿಸಿದ್ದ ಪಂಜಾಬ್ ಕಿಂಗ್ಸ್ ತಂಡ ಈಗ ಸಾಲು ಸಾಲು ಸೋಲಿನಿಂದಾಗಿ ಕಂಗಾಲಾಗಿದೆ. ಗೆಲುವಿನ ಹಾದಿಗೆ ಮರಳಿ ಪ್ಲೇ ಆಫ್ಸ್ ರೇಸ್ನಲ್ಲಿ ಉಳಿಯಲು ಶ್ರೇಯಸ್ ಅಯ್ಯರ್ ಬಳಗಕ್ಕೆ ಈ ಪಂದ್ಯದಲ್ಲಿ ಗೆಲುವು ಬಹಳಾ ಮುಖ್ಯವಾಗಿದೆ.