IPL 2025: ʻಫೈನಲ್ನಲ್ಲಿ ಅಪರಾಧವೆಸಗಿದ ಶ್ರೇಯಸ್ ಅಯ್ಯರ್ʼ-ಯೋಗರಾಜ್ ಸಿಂಗ್ ಆರೋಪ!
Yograj Singh on Shreyas Iyer: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ 2025 ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ಶಾಟ್ ಸೆಲೆಕ್ಷನ್ ಬಗ್ಗೆ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಶ್ರೇಯಸ್ ಅಯ್ಯರ್ ವಿರುದ್ಧ ಯೋಗರಾಜ್ ಸಿಂಗ್ ಗಂಭೀರ ಆರೋಪ.

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರುದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಅವರ ಶಾಟ್ ಸೆಲೆಕ್ಷನ್ ಬಗ್ಗೆ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ (Yograj Singh) ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್ಗೆ ಬಂದಿದ್ದ ಶ್ರೇಯಸ್ ಅಯ್ಯರ್ ಎರಡು ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ರೊಮ್ಯಾರಿಯೊ ಶೆಫರ್ಡ್ಗೆ ವಿಕೆಟ್ ಒಪ್ಪಿಸಿದ್ದರು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ 6 ರನ್ಗಳಿಂದ ಸೋಲು ಅನುಭವಿಸಿತ್ತು.
ಆರ್ಸಿಬಿ ನೀಡಿದ್ದ 191 ರನ್ಗಳ ಗುರಿಯನ್ನು ಹಿಂಬಾಲಿಸಿದ್ದ ಪಂಜಾಬ್ ಕಿಂಗ್ಸ್ ಎರಡು ವಿಕೆಟ್ ಕಳೆದುಕೊಂಡಿದ್ದ ವೇಳೆ ಕ್ರೀಸ್ಗೆ ಬಂದಿದ್ದ ಶ್ರೇಯಸ್ ಅಯ್ಯರ್, ಸಾಕಷ್ಟು ಭರಸೆಯನ್ನು ಮೂಡಿಸಿದ್ದರು. ಏಕೆಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿಯೂ ಅವರು ಏಕಾಂಗಿ ಬ್ಯಾಟ್ ಮಾಡಿ ತಮ್ಮ ತಂಡವನ್ನು ಇನ್ನೂ ಒಂದು ಓವರ್ ಬಾಕಿ ಇರುವಾಗಲೇ ಗೆಲ್ಲಿಸಿದ್ದರು. ಅದರಂತೆ ಫೈನಲ್ ಪಂದ್ಯದಲ್ಲಿಯೂ ಅವರ ಮೇಲೆ ಹೆಚ್ಚಿನ ನಿರೀಕ್ಷೆಯನ್ನು ಇಡಲಾಗಿತ್ತು. ಆದರೆ, 10ನೇ ಓವರ್ ನಾಲ್ಕನೇ ಎಸೆತದಲ್ಲಿ ಆಫ್ ಸ್ಟಂಪ್ಗೆ ಕ್ಲೋಸ್ ಆಗಿದ್ದ ಚೆಂಡನ್ನು ಪಾಯಿಂಟ್ ಮೇಲೆ ಕಟ್ ಮಾಡಲು ಹೋಗಿ ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಜಿತೇಶ್ ಶರ್ಮಾಗೆ ಕ್ಯಾಚ್ ಕೊಟ್ಟಿದ್ದರು.
IPL 2025: ʻನಾವು ತೀವ್ರ ದುಖಃದಲ್ಲಿದ್ದೇವೆʼ-ಕಾಲ್ತುಳಿತದ ಪ್ರಕರಣದ ಬಗ್ಗೆ ಆರ್ಸಿಬಿ ಪ್ರತಿಕ್ರಿಯೆ!
ಎಎನ್ಐ ಸುದ್ದಿ ಸಂಸ್ಥೆಯ ಜೊತೆ ಮಾತನಾಡಿದ ಯೋಗರಾಜ್ ಸಿಂಗ್, "ಫೈನಲ್ ಹಣಾಹಣಿಯಲ್ಲಿ ಶ್ರೇಯಸ್ ಅಯ್ಯರ್ ಆಡಿದ ಆ ಶಾಟ್ ನನ್ನ ಪ್ರಕಾರ ಕ್ರಿಮಿನಲ್ ಅಪರಾಧವಾಗಿದೆ. ಈ ಕ್ರಿಮಿನಲ್ ಅಪರಾಧ 302ನೇ ಸೆಕ್ಷನ್ನಲ್ಲಿ ಬರಲಿದೆ ಎಂದು ಅಶೋಕ್ ಮಂಕಡ್ ಅವರು ನನಗೆ ತಿಳಿಸಿದ್ದಾರೆ. ಇದರ ಪರಿಣಾಮ ನಿಮಗೆ ಎರಡು ಪಂದ್ಯಗಳ ನಿಷೇಧ ಹೇರಲಾಗುವುದು ಎಂದೂ ಅವರು ನನಗೆ ಹೇಳಿದ್ದಾರೆ. ಫೈನಲ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಮಾಡಿದ್ದನ್ನು ಸ್ವೀಕರಿಸಲು ಸಾಧ್ಯವಿಲ್ಲ. ಇದಕ್ಕೆ ಯಾವುದೇ ಕ್ಷಮೆ ಇಲ್ಲ," ಎಂದು ತಿಳಿಸಿದ್ದಾರೆ.
ಶಶಾಂಕ್ ಸಿಂಗ್ ಹೋರಾಟ ವ್ಯರ್ಥ
ಪಂಜಾಬ್ ಕಿಂಗ್ಸ್ ತಂಡದ ಚೇಸಿಂಗ್ನಲ್ಲಿ ಶ್ರೇಯಸ್ ಅಯ್ಯರ್ ವೈಫಲ್ಯ ಅನುಭವಿಸಿದ್ದರೂ ಶಶಾಂಕ್ ಸಿಂಗ್ ಕೊನೆಯ ಎರಡು ಓವರ್ಗಳಲ್ಲಿ ಸದ್ದಿಲ್ಲದೆ ಅಬ್ಬರಿಸಿದ್ದರು. ಅವರು ಆಡಿದ್ದ 30 ಎಸೆತಗಳಲ್ಲಿ ಅಜೇಯ 61 ರನ್ಗಳನ್ನು ಕಲೆ ಹಾಕಿದ್ದರು. ಆದರೂ ಕೇವಲ 6 ರನ್ಗಳಿಂದ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ಸೋಲು ಅನುಭವಿಸಿತ್ತು. ಈ ಪಂದ್ಯದಲ್ಲಿ ಆರ್ಸಿಬಿ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವನ್ನು ತೋರಿದ್ದ ಕೃಣಾಲ್ ಪಾಂಡ್ಯ 4 ಓವರ್ಗಳಿಗೆ ಕೇವಲ 17 ರನ್ ನೀಡಿ ಎರಡು ನಿರ್ಣಾಯಕ ವಿಕೆಟ್ಗಳನ್ನಯ ಕಿತ್ತು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
RCB vs PBKS: ಸತತ 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ!
190 ರನ್ಗಳನ್ನು ಕಲೆ ಹಾಕಿದ್ದ ಆರ್ಸಿಬಿ
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ತನ್ನ ಪಾಲಿನ 20 ಓವರ್ಗಳಿಗೆ 9 ವಿಕೆಟ್ಗಳ ನಷ್ಟಕ್ಕೆ 190 ರನ್ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ಪಂಜಾಬ್ ಕಿಂಗ್ಸ್ಗೆ 191 ರನ್ಗಳ ಗುರಿಯನ್ನು ನೀಡಿತ್ತು. 43 ರನ್ ಗಳಿಸಿದ ವಿರಾಟ್ ಕೊಹ್ಲಿ ಆರ್ಸಿಬಿ ಪರ ವೈಯಕ್ತಿಕ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದಾರೆ. ಜಿತೇಶ್ ಶರ್ಮಾ 10 ಎಸೆತಗಳಲ್ಲಿ 24 ರನ್ ಸಿಡಿಸಿದ್ದರು.