Yash Dayal: ಆರ್ಸಿಬಿ ಸ್ಟಾರ್ ವೇಗಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; FIR ದಾಖಲು
ಭಾರತೀಯ ಕ್ರಿಕೆಟಿಗ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಮಹಿಳೆ ಕ್ರಿಕೆಟಿಗನ ವಿರುದ್ಧ ಲೈಂಗಿಕ ಕಿರುಕುಳ, ಮಾನಸಿಕ ಮತ್ತು ದೈಹಿಕ ಹಲ್ಲೆ ಆರೋಪ ಹೊರಿಸಿದ್ದಾರೆ.


ಲಖನೌ: ಭಾರತೀಯ ಕ್ರಿಕೆಟಿಗ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವೇಗಿ ಯಶ್ ದಯಾಳ್ (Yash Dayal) ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶದ (Uttar Pradesh) ಮಹಿಳೆ ಕ್ರಿಕೆಟಿಗನ ವಿರುದ್ಧ ಲೈಂಗಿಕ ಕಿರುಕುಳ, ಮಾನಸಿಕ ಮತ್ತು ದೈಹಿಕ ಹಲ್ಲೆ ಆರೋಪ ಹೊರಿಸಿದ್ದಾರೆ. ದಯಾಳ್ ವಿರುದ್ಧ ಅಧಿಕೃತವಾಗಿ ಎಫ್ಐಆರ್ ದಾಖಲಾಗಿದೆ. ದಯಾಳ್ ವಿರುದ್ಧ ಮದುವೆಯ ನೆಪದಲ್ಲಿ ಶೋಷಣೆಯ ದೂರು ದಾಖಲಿಸಲಾಗಿದ್ದು, ಇದೀಗ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಗಾಜಿಯಾಬಾದ್ನ ಮಹಿಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆನ್ಲೈನ್ ದೂರು ಪೋರ್ಟಲ್ ಐಜಿಆರ್ಎಸ್ನಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಎಫ್ಐಆರ್ ಪ್ರಕಾರ, ಮಹಿಳೆ ಯಶ್ ದಯಾಳ್ ಜೊತೆ ಐದು ವರ್ಷಗಳ ಕಾಲ ಸಂಬಂಧ ಹೊಂದಿದ್ದರು ಮತ್ತು ಆ ಸಮಯದಲ್ಲಿ ಅವರ ಕುಟುಂಬವನ್ನು ಭೇಟಿಯಾಗಿದ್ದಾಗಿ ಹೇಳಿಕೊಂಡಿದ್ದಾರೆ. ದಯಾಳ್ ತಮ್ಮ ಸಂಬಂಧದ ಅವಧಿಯಲ್ಲಿ ತನ್ನನ್ನು ಮಾನಸಿಕವಾಗಿ, ಆರ್ಥಿಕವಾಗಿ ಮತ್ತು ದೈಹಿಕವಾಗಿ ಶೋಷಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಆತ ನನನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಆತನ ನಿಜ ಬಣ್ಣ ಬಯಲಾಗುತ್ತಿದ್ದಂತೆ ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.
ಇಷ್ಟೇ ಅಲ್ಲದೆ ಆಕೆ ಮತ್ತಷ್ಟು ಆರೋಪವನ್ನು ಹೊರಿಸಿದ್ದು, ತನಗೆ ಮಾತ್ರ ಅಲ್ಲ ಇನ್ನೂ ಹಲವಾರು ಮಹಿಳೆಯರಿಗೆ ದಯಾಳ್ ಮೋಸ ಮಾಡಿದ್ದಾರೆ ಎಂದು ಆಕೆ ಹೇಳಿದ್ದಾಳೆ. ತಾನು ಜೂನ್ 14, 2025 ರಂದು ಮಹಿಳಾ ಸಹಾಯವಾಣಿ (181) ಗೆ ಕರೆ ಮಾಡುವ ಮೂಲಕ ಘಟನೆ ಕುರಿತು ದೂರು ನೀಡುವ ಪ್ರಯತ್ನ ಮಾಡಿದೆ. ಆದರೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ನಾನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಬಲೆಯಾಗಿದ್ದೇನೆ. ದಯಾಳ್ ವಿರುದ್ಧ ಹೋರಾಡುವ ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ನಾನು ಮುಖ್ಯಮಂತ್ರಿಗಳ ಕಚೇರಿಯನ್ನು ಸಂಪರ್ಕಿಸಿದ್ದೇನೆ ಎಂದು ಆಕೆ ಹೇಳಿದ್ದಾಳೆ.
ಈ ಸುದ್ದಿಯನ್ನೂ ಓದಿ: Bengaluru Stampede: ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಆರ್ಸಿಬಿ-ಕೆಎಸ್ಸಿಎ
ಭಾರತೀಯ ಕ್ರಿಕೆಟಿಗ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಮಹಿಳೆ ಕ್ರಿಕೆಟಿಗನ ವಿರುದ್ಧ ಲೈಂಗಿಕ ಕಿರುಕುಳ, ಮಾನಸಿಕ ಮತ್ತು ದೈಹಿಕ ಹಲ್ಲೆ ಆರೋಪ ಹೊರಿಸಿದ್ದಾರೆ. ದಯಾಳ್ ವಿರುದ್ಧ ಅಧಿಕೃತವಾಗಿ ಎಫ್ಐಆರ್ ದಾಖಲಾಗಿದೆ. ದಯಾಳ್ ವಿರುದ್ಧ ಮದುವೆಯ ನೆಪದಲ್ಲಿ ಶೋಷಣೆಯ ದೂರು ದಾಖಲಿಸಲಾಗಿದ್ದು, ಇದೀಗ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.