ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ʻಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲʼ: ರೋಹಿತ್‌ ಶರ್ಮಾರ ನಿವೃತ್ತಿ ವದಂತಿಗಳ ಬಗ್ಗೆ ಆರ್‌ ಅಶ್ವಿನ್‌ ಪ್ರತಿಕ್ರಿಯೆ!

ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಆಯ್ಕೆ ಸಮಿತಿಯ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದರೆಂಬ ವದಂತಿಗಳ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಮತ್ತು ಆಯ್ಕೆ ಸಮಿತಿಯ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯದ ವದಂತಿಗಳಲ್ಲಿ ಸ್ವಲ್ಪ ಮಟ್ಟಿಗೆ ಸತ್ಯಾಂಶ ಇರಬಹುದೆಂದು ಅವರು ಹೇಳಿದ್ದಾರೆ.

ರೋಹಿತ್‌ ಶರ್ಮಾ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಅಶ್ವಿನ್‌.

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೂ (IND vs ENG) ಮುನ್ನ ರೋಹಿತ್ ಶರ್ಮಾ (Rohit Sharma) ಆಯ್ಕೆ ಸಮಿತಿಯ ವಿಶ್ವಾಸ ಕಳೆದುಕೊಂಡಿದ್ದರು ಎಂಬ ವದಂತಿಗಳಲ್ಲಿ ಕೆಲಮಟ್ಟಿಗೆ ಸತ್ಯಾಂಶ ಇರಬಹುದೆಂದು ಸ್ಪಿನ್‌ ದಿಗ್ಗಜ ರವಿಚಂದ್ರನ್‌ ಅಶ್ವಿನ್‌ (R Ashwin) ಹೇಳಿದ್ದಾರೆ. ಲಾರ್ಡ್ಸ್‌ನಲ್ಲಿ ನಡೆದಿದ್ದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ 388 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿ ಸೋಲು ಕಂಡರೂ, ರೋಹಿತ್ ಶರ್ಮಾ 110 ಎಸೆತಗಳಲ್ಲಿ 138 ರನ್‌ಗಳ ಸಿಡಿಲಿನ ಇನಿಂಗ್ಸ್‌ ಆಡಿ ಮಿಂಚಿದ್ದರು. ಇದರೊಂದಿಗೆ ಲಾರ್ಡ್ಸ್ ಮೈದಾನದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಶತಕ ದಾಖಲಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಐತಿಹಾಸಿಕ ಸಾಧನೆ ಮಾಡಿದ್ದರು.

ಮೂರನೇ ಏಕದಿನ ಪಂದ್ಯಕ್ಕೂ ಮುನ್ನವೇ ಅದು ರೋಹಿತ್ ಶರ್ಮಾ ಅವರ ಕೊನೆಯ ಏಕದಿನ ಪಂದ್ಯವಾಗಲಿದೆ ಎಂಬ ವದಂತಿಗಳು ವ್ಯಾಪಕವಾಗಿ ಹರಿದಾಡಿದ್ದವು. ಸರಣಿ ಆರಂಭಕ್ಕೂ ಮುನ್ನವೇ ಈ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿತ್ತು ಎಂಬ ಸುದ್ದಿಯೂ ಕೇಳಿಬಂದಿತ್ತು. ಇದರ ಜೊತೆಗೆ, ಮುಖ್ಯ ಕೋಚ್ ಗಂಭೀರ್‌, ವಿರಾಟ್ ಕೊಹ್ಲಿ ಹಾಗೂ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರ ವಿರುದ್ಧ ರೋಹಿತ್ ಅಸಮಾಧಾನ ವ್ಯಕ್ತಪಡಿಸಿದ್ದರು ಎಂಬ ಮಾತುಗಳೂ ಹರಿದಾಡಿದ್ದವು. ಆದರೆ, ಈ ಎಲ್ಲ ವರದಿಗಳ ಕುರಿತು ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಅಫ್ಘಾನಿಸ್ತಾನ ಒಡಿಐ ನಾಯಕತ್ವದಿಂದ ಕೆಳಗಿಳಿದು ಭಾವುಕ ಸಂದೇಶ ಹಂಚಿಕೊಂಡ ಹಷ್ಮತ್‌ವುಲ್ಲಾ ಶಾಹಿದಿ!!

ಬೆಂಕಿ ಇಲ್ಲದೆ ಹೊಗೆ ಬರುವುದಿಲ್ಲ: ಅಶ್ವಿನ್‌

ಮೂರನೇ ಏಕದಿನ ಪಂದ್ಯಕ್ಕೆ ಎರಡು ದಿನಗಳ ಮೊದಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ದೇವಜಿತ್ ಸೈಕಿಯಾ, ರೋಹಿತ್ ಶರ್ಮಾ ಅವರ ನಿವೃತ್ತಿ ವದಂತಿಗಳನ್ನು ತಳ್ಳಿಹಾಕಿದ್ದರು. ಆದರೆ, ಈ ವಿಚಾರದಲ್ಲಿ "ಬೆಂಕಿಯಿಲ್ಲದೆ ಹೊಗೆ ಬರುವುದಿಲ್ಲ" ಎಂಬ ಅಭಿಪ್ರಾಯವನ್ನು ಮಾಜಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ವ್ಯಕ್ತಪಡಿಸಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಅಶ್ವಿನ್, "ರೋಹಿತ್ ಶರ್ಮಾ ನಿವೃತ್ತಿಯಾಗಬಹುದು ಎಂಬ ಸುದ್ದಿ ಹೊರಬಂದಾಗ ಹಲವರು ಅದನ್ನು ಕೇವಲ ಹೊರಗಿನ ಗದ್ದಲ ಎಂದು ಕರೆದರು. ನಾನು ಹಾಗೆ ಹೇಳುವುದಿಲ್ಲ. ತಮಿಳಿನಲ್ಲಿ ಒಂದು ಗಾದೆಯಿದೆ – 'ಬೆಂಕಿಯಿಲ್ಲದೆ ಹೊಗೆ ಬರುವುದಿಲ್ಲ'. ಅಂದರೆ, ಆ ವದಂತಿಗಳ ಹಿಂದೆ ಏನೋ ಕಾರಣವಿತ್ತು. ಆದರೆ, ರೋಹಿತ್ ಬ್ಯಾಟ್‌ನಿಂದಲೇ ಉತ್ತರ ನೀಡಿದರು. ಅವರು ಇನ್ನೂ ಉತ್ತಮವಾಗಿ ಆಡಬಲ್ಲರು ಎಂಬುದನ್ನು ಸಾಬೀತುಪಡಿಸಿದರು. 2027ರ ವಿಶ್ವಕಪ್ ಆಡುವ ಬಗ್ಗೆ ಅವರ ಮನಸ್ಸಿನಲ್ಲಿ ಯಾವುದೇ ಸಂದೇಹವಿಲ್ಲ ಎಂದು ನಾನು ಭಾವಿಸುತ್ತೇನೆ," ಎಂದು ಹೇಳಿದ್ದಾರೆ.

ʻಸಂಜು ವೃತ್ತಿ ಜೀವನವನ್ನು ಹಾಳು ಮಾಡಿದ್ದೀರಿ, ಇದೀಗ ರಾಹುಲ್‌ʼ: ಟೀಮ್‌ ಮ್ಯಾನೇಜ್‌ಮೆಂಟ್‌ ವಿರುದ್ಧ ಕೆ ಶ್ರೀಕಾಂತ್‌ ಕಿಡಿ!

2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ರೋಹಿತ್ ಗಾಯಗೊಂಡಿದ್ದು, ಅದರ ಪರಿಣಾಮವಾಗಿ ಐದು ಪಂದ್ಯಗಳಿಂದ ಹೊರಗುಳಿದಿದ್ದರು. ಅವರು ಸಂಪೂರ್ಣ ಫಿಟ್ ಆಗಿದ್ದರೆ, ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ಬೌಲರ್‌ಗಳ ಮೇಲೆ ಇನ್ನಷ್ಟು ಪ್ರಾಬಲ್ಯ ಸಾಧಿಸಬಹುದಾಗಿತ್ತು ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್ ಶರ್ಮಾ ಶತಕಕ್ಕೆ ಅಶ್ವಿನ್ ಮೆಚ್ಚುಗೆ

ಲಾರ್ಡ್ಸ್‌ನಲ್ಲಿ ರೋಹಿತ್ ಶರ್ಮಾ ದಾಖಲಿಸಿದ ಹೋರಾಟದ ಶತಕವನ್ನು ಮಾಜಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಗುಣಗಾನ ಮಾಡಿದ್ದಾರೆ. ಹೊರಗಿನ ಒತ್ತಡಗಳ ಜೊತೆಗೆ ರೋಹಿತ್ ಅವರು ಗಾಯದ ಪರಿಣಾಮವನ್ನೂ ಎದುರಿಸುತ್ತಿದ್ದಿರಬಹುದು ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಋತುವಿನಲ್ಲಿ ರೋಹಿತ್ ಶರ್ಮಾ ಗಾಯಕ್ಕೆ ಒಳಗಾಗಿದ್ದು, ಅದರ ಕಾರಣದಿಂದಾಗಿ ಐದು ಪಂದ್ಯಗಳಿಂದ ಹೊರಗುಳಿದಿದ್ದರು. ರೋಹಿತ್ ಸಂಪೂರ್ಣ ಫಿಟ್ ಆಗಿದ್ದರೆ, ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ಬೌಲರ್‌ಗಳ ವಿರುದ್ಧ ಇನ್ನಷ್ಟು ಪ್ರಾಬಲ್ಯ ಸಾಧಿಸಬಹುದಾಗಿತ್ತು ಎಂದು ಅಶ್ವಿನ್ ಹೇಳಿದ್ದಾರೆ. ಗಾಯದ ಸಮಸ್ಯೆ ಹಾಗೂ ಹೊರಗಿನ ಚರ್ಚೆಗಳ ನಡುವೆಯೂ ರೋಹಿತ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.