ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಟಿ20 ವಿಶ್ವಕಪ್‌ ಟೂರ್ನಿಯಿಂದ ಶುಭಮನ್‌ ಗಿಲ್‌ರನ್ನು ತೆಗೆಯಲು ಕಾರಣ ತಿಳಿಸಿದ ಅಜಿತ್‌ ಅಗರ್ಕರ್‌!

Ajit Agarkar on Shubman Gill: ಮುಂದಿನ ವರ್ಷ ನಡೆಯುವ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ. ಆದರೆ, ಉಪ ನಾಯಕ ಶುಭಮನ್‌ ಗಿಲ್‌ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಇದಕ್ಕೆ ಬಲವಾದ ಕಾರಣವೇನೆಂದು ಬಿಸಿಸಿಐ ಚೀಫ್‌ ಸೆಲೆಕ್ಟರ್‌ ವಿವರಿಸಿದ್ದಾರೆ.

ಶುಭಮನ್‌ ಗಿಲ್‌ರನ್ನು ಕೈ ಬಿಡಲು ಕಾರಣ ತಿಳಿಸಿದ ಅಜಿತ್‌ ಅಗರ್ಕರ್.

ನವದೆಹಲಿ: ಮುಂದಿನ ವರ್ಷ ನಡೆಯುವ 2026ರ ಐಸಿಸಿ ಟಿ20 ವಿಶ್ವಕಪ್‌ (ICC T20 World Cup 2026) ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ. ಆದರೆ, ದಕ್ಷಿಣ ಆಫ್ರಿಕಾ ಟಿ20ಐ ಸರಣಿಯಲ್ಲಿ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಉಪ ನಾಯಕ ಶುಭಮನ್‌ ಗಿಲ್‌ (Shubman Gill) ಅವರನ್ನು ಆಯ್ಕೆದಾರರು ಕೈ ಬಿಟ್ಟದ್ದಾರೆ. ಆ ಮೂಲಕ ಸಂಜು ಸ್ಯಾಮ್ಸನ್‌ ಅವರನ್ನು ಓಪನಿಂಗ್‌ ಬ್ಯಾಟ್ಸ್‌ಮನ್‌ ಹಾಗೂ ಮೊದಲ ವಿಕೆಟ್‌ ಕೀಪರ್‌ ಆಗಿ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಅಂದ ಹಾಗೆ ಶುಭಮನ್‌ ಗಿಲ್‌ ಅವರನ್ನು ಟಿ20 ವಿಶ್ವಕಪ್‌ ತಂಡದಿಂದ ಕೈ ಬಿಡಲು ಕಾರಣವೇನೆಂದು ಚೀಪ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್‌ (Ajit Agarkar) ಬಹಿರಂಗಪಡಿಸಿದ್ದಾರೆ.

ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದ ಬಳಿಕ ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್‌ ಅಗರ್ಕರ್‌ ಸುದ್ದಿಗೋಷ್ಠಿಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಸುದ್ದಿಗಾರರು ಶುಭಮನ್‌ ಗಿಲ್‌ ಅವರನ್ನು ಏಕೆ ಕೈ ಬಿಡಲಾಯಿತು ಎಂದು ಪ್ರಶ್ನೆಯನ್ನು ಕೇಳಿದರು.

IND vs SA: ಅರ್ಧಶತಕ ಬಾರಿಸಿ ರೋಹಿತ್‌ ಶರ್ಮಾ ದಾಖಲೆ ಮುರಿದ ತಿಲಕ್‌ ವರ್ಮಾ!

"ಶುಭಮನ್‌ ಗಿಲ್‌ ಅವರ ಗುಣಮಟ್ಟದ ಬಗ್ಗೆ ಯಾವುದೇ ಅನುಮಾನವಿಲ್ಲ. ಅವರು ಇತ್ತೀಚೆಗೆ ಟಿ20ಐ ಕ್ರಿಕೆಟ್‌ನಲ್ಲಿ ಹೆಚ್ಚಿನ ರನ್‌ಗಳನ್ನು ಗಳಿಸಿಲ್ಲ. ಅವರನ್ನು ಗುರುತಿಸುವಾಗ, ಇದನ್ನು ನಾವು ಪರಿಗಣಿಸುವುದಿಲ್ಲ. ಕಳೆದ ಟಿ20 ವಿಶ್ವಕಪ್‌ ಟೂರ್ನಿಯನು ಕಳೆದುಕೊಂಡಿದ್ದ ಅವರಿಗೆ ನಿಜಕ್ಕೂ ಅದೃಷ್ಟ ಇಲ್ಲವೆಂದು ಹೇಳಬಹುದು. ಆದರೆ, ಈಗ ನಾವು ವಿಭಿನ್ನ ಸಂಯೋಜನೆಯನ್ನು ಪ್ರಯತ್ನಿಸುತ್ತಿದ್ದೇವೆ," ಎಂದು ಅಜಿತ್‌ ಅಗರ್ಕರ್‌ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

"ಮತ್ತೊಮ್ಮೆ ಹೇಳಬೇಕೆಂದರೆ, ಇದು ವೈಯಕ್ತಿಕ ಸಾಮರ್ಥ್ಯಕ್ಕಿಂತ ತಂಡದ ಸಮತೋಲನದ ಕುರಿತಾಗಿದೆ. ನಿರ್ದಿಷ್ಟವಾಗಿ ಅಗ್ರ ಕ್ರಮಾಂಕದಲ್ಲಿ ಇಬ್ಬರು ವಿಕೆಟ್‌ಕೀಪರ್‌ಗಳನ್ನು ಹೊಂದುವ ಕಲ್ಪನೆಯ ಬಗ್ಗೆ," ಎಂದು ಅಗರ್ಕರ್ ಹೇಳಿದರು.

India squad for T20 World Cup: 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡ ಪ್ರಕಟ!

ಗಿಲ್‌ರನ್ನು ಕೈ ಬಿಟ್ಟಿರುವ ಬಗ್ಗೆ ಸೂರ್ಯ ಹೇಳಿದ್ದಿದು

ಭಾರತ ಟಿ20 ವಿಶ್ವಕಪ್‌ ತಂಡದಿಂದ ಶುಭಮನ್‌ ಗಿಲ್‌ ಅವರನ್ನು ಕೈ ಬಿಟ್ಟಿರುವ ಬಗ್ಗೆ ನಾಯಕ ಸೂರ್ಯಕುಮಾರ್‌ ಯಾದವ್‌ ಕೂಡ ಪ್ರತಿಕ್ರಿಯಿಸಿದ್ದಾರೆ. ಫಾರ್ಮ್‌ಗಿಂತ ತಂಡದ ಸಂಯೋಜನೆ ತುಂಬಾ ಮುಖ್ಯ ಎಂದು ಹೇಳಿದ್ದಾರೆ.

"ಇದು ಅವರ ಫಾರ್ಮ್ ಬಗ್ಗೆ ಅಲ್ಲ. ಇದು ಕೇವಲ ಸಂಯೋಜನೆಯ ಬಗ್ಗೆ. ನಾವು ಅಗ್ರ ಕ್ರಮಾಂಕದಲ್ಲಿ ವಿಕೆಟ್‌ ಕೀಪರ್ ಅನ್ನು ಹೊಂದಲು ಬಯಸಿದ್ದೇವೆ. ಇದು ಅವರ ಫಾರ್ಮ್ ಬಗ್ಗೆ ಅಲ್ಲ. ಅವರ ಗುಣಮಟ್ಟದ ಬಗ್ಗೆ ಯಾವುದೇ ಚರ್ಚೆ ಇಲ್ಲ. ಅವರು ಅದ್ಭುತ ಆಟಗಾರ," ಸೂರ್ಯಕುಮಾರ್ ಯಾದವ್‌ ತಿಳಿಸಿದ್ದಾರೆ.



"ನಮಗೆ ರಿಂಕು ಸಿಂಗ್‌ ಅಗತ್ಯವಿದೆ. ನಮಗೆ ವಾಷಿಂಗ್ಟನ್‌ ಸುಂದರ ಅವರು ಕೂಡ ತಂಡದಲ್ಲಿ ಇದ್ದಾರೆ. ಹಲವು ಸಂಯೋಜನೆಯ ಬಗ್ಗೆ ನಾವು ಹೊಂದಿಕೊಳ್ಳುವ ಅಗತ್ಯವಿದೆ. ಈ ಕಾರಣದಿಂದಲೇ ನಾವು ಈ ಆಟಗಾರರನ್ನು ಆಯ್ಕೆ ಮಾಡಿದ್ದೇವೆ. ಆದರೆ, ಶುಭಮನ್‌ ಗಿಲ್‌ ಅವರ ಕ್ಲಾಸ್‌ ಬಗ್ಗೆ ಯಾವುದೇ ಪ್ರಶ್ನೆ ಇಲ್ಲ," ಎಂದು ಟೀಮ್‌ ಇಂಡಿಯಾ ನಾಯಕ ಹೇಳಿದ್ದಾರೆ.