Bangalore stampede: ʻಸಂಭ್ರಮಾಚರಣೆಗಿಂತ ಅಭಿಮಾನಿಗಳ ಜೀವ ಮುಖ್ಯʼ-ಕಪಿಲ್ ದೇವ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಂಡಿಯನ್ ಪ್ರೀಮಿಯರ್ ಲೀಗ್ನ ಚೊಚ್ಚಲ ಕಪ್ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ 11 ಮಂದಿ ಸಾವು ಹಾಗೂ 47 ಮಂದಿ ಸಾವಿಗೀಡಾದ ಪ್ರಕರಣ ಸಂಬಂಧ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಪ್ರತಿಕ್ರಿಯೆ ನೀಡಿದ್ದಾರೆ. ಸಂಭ್ರಮಾಚರಣೆಗಿಂತ ಜೀವ ಮುಖ್ಯ ಎಂದು ಹೇಳಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣದ ಬಗ್ಗೆ ಕಪಿಲ್ ದೇವ್ ಪ್ರತಿಕ್ರಿಯೆ.

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ 2025ರ ಇಂಡಿಯನ್ ಪ್ರೀಮಿಯರ್ ಲೀಗ್(IPL 2025) ಟೂರ್ನಿಯಲ್ಲಿ ಪ್ರಶಸ್ತಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾಗಿದ್ದರು ಹಾಗೂ 47 ಮಂದಿ ಗಾಯಕ್ಕೆ ತುತ್ತಾಗಿದ್ದರು. ಈ ಪ್ರಕರಣದ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ಪ್ರತಿಕ್ರಿಯೆ ನೀಡಿದ್ದರು. ಇದೀಗ 1983ರ ವಿಶ್ವಕಪ್ ವಿಜೇತ ಭಾರತ ತಂಡದ ನಾಯಕ ಕಪಿಲ್ ದೇವ್ (Kapil Dev) ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ತಂಡದ ಸಂಭ್ರಮಾಚರಣೆಗಿಂತ ಜೀವ ತುಂಬಾ ಮುಖ್ಯ. ಹಾಗಾಗಿ ಆಯೋಜಕರು ಹಾಗೂ ಸಾರ್ವಜನಿಕರು ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ನೀಡಬೇಕೆಂದು ಹೇಳಿದ್ದಾರೆ. ಅಲ್ಲದೆ ಈ ದುರ್ಘನೆಗೆ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಪಿಟಿಐ ಸುದ್ದಿ ಸಂಸ್ಥೆ ಬಗ್ಗೆ ಮಾತನಾಡಿದ ಕಪಿಲ್ ದೇವ್, "ಈ ದುರ್ಘಟನೆ ಬಗ್ಗೆ ನನಗೆ ತುಂಬಾ ಬೇಸರವಾಗಿದೆ. ಈ ವಿಷಯದ ಬಗ್ಗೆ ನಾವು ಒಬ್ಬರಿಗೊಬ್ಬರು ಕಲಿಯಬೇಕಾಗಿದೆ. ಮುಂದಿನ ಸಲ ಈ ರೀತಿ ಸಂಭ್ರಮಾಚರಣೆಯಲ್ಲಿ ತೊಡಗುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಜನರು ತಪ್ಪುಗಳನ್ನು ಮಾಡುವುದು ಸಹಜ," ಎಂದು ಹೇಳಿದ್ದಾರೆ.
IPL 2025: ʻನಾವು ತೀವ್ರ ದುಖಃದಲ್ಲಿದ್ದೇವೆʼ-ಕಾಲ್ತುಳಿತದ ಪ್ರಕರಣದ ಬಗ್ಗೆ ಆರ್ಸಿಬಿ ಪ್ರತಿಕ್ರಿಯೆ!
ಬೆಂಗಳೂರಿನಲ್ಲಿ ನಡೆದಿದ್ದ ದುರ್ಘನೆಯಿಂದ ಸಾವಿಗೀಡಾದ ಪ್ರಕರಣದಿಂದ ತಂಡಗಳು ಹಾಗೂ ಆಯೋಜಕರು ಎಚ್ಚೆತ್ತುಕೊಳ್ಳಬೇಕು ಹಾಗೂ ಭವಿಷ್ಯದಲ್ಲಿ ದೊಡ್ಡ ಸಂಭ್ರಮಾಚರಣೆಗಳನ್ನು ಮಾಡುವುದನ್ನು ತಪ್ಪಿಸಬೇಕು ಎಂದು ಕಪಿಲ್ ದೇವ್ ಆಗ್ರಹಿಸಿದ್ದಾರೆ.
"ನೀವು ಆನಂದಿಸುತ್ತಿರುವಾಗ ಮತ್ತು ನೀವು ಜೀವಗಳನ್ನು ಕಳೆದುಕೊಳ್ಳುವಷ್ಟು ದೊಡ್ಡ ತಪ್ಪು ಮಾಡಬಾರದು. ಭವಿಷ್ಯದಲ್ಲಿ, ಯಾವುದೇ ತಂಡ ಗೆದ್ದರೆ, ಅದನ್ನು ಶಾಂತವಾಗಿಡಿ. ಆಚರಣೆಗಿಂತ ಜೀವಗಳು ಮುಖ್ಯ. ಅದನ್ನು ಹಾಗೆಯೇ ಇಡೋಣ," ಎಂದು ಮಾಜಿ ಆಲ್ರೌಂಡರ್ ಹೇಳಿದ್ದಾರೆ.
Bangalore Stampede: ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರು
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ ಸಂಭ್ರಮಾಚರಣೆಯನ್ನು ಜೂನ್ 4 ರಂದು ಆಚರಿಸಲಾಗಿತ್ತು. ಇದು ಆರ್ಸಿಬಿ ತಂಡದ ಚೊಚ್ಚಲ ಕಪ್ ಆಗಿತ್ತು. ಈ ಕಾರಣದಿಂದಲೇ ಅಭಿಮಾನಿಗಳು ಕೂಡ ಉತ್ಸುಕರಾಗಿದ್ದರು ಹಾಗೂ ತಂಡದ ಸಂಭ್ರಮಚಾರಣೆಯನ್ನು ಕಣ್ತುಂಬಿಸಿಕೊಳ್ಳಲು ಬಂದಿದ್ದರು. ಆದರೆ, ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸಾಮರ್ಥ್ಯ 30 ಸಾವಿರ, ಆದರೆ ಎರಡು ಲಕ್ಷಕ್ಕೂ ಅಧಿಕ ಅಭಿಮಾನಿಗಳು ಸ್ಟೇಡಿಯಂಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ಉಂಟಾಗಿದ್ದ ಕಾಲ್ತುಳಿತಕ್ಕೆ ರಾಜ್ಯದ ವಿವಿಧ ಭಾಗದ 11 ಮಂದಿ ಸಾವೀಗೀಡಾಗಿದ್ದರು ಹಾಗೂ 47 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.