ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Stampede: ಕಬ್ಬನ್ ಪಾರ್ಕ್‌ನ ಗಿಡ-ಮರಗಳಿಗೆ ಹಾನಿ; ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ದೂರು ದಾಖಲು

ಜನರ ಕಾಲ್ತುಳಿತದಿಂದ ಕಬ್ಬನ್​ ಪಾರ್ಕ್​​ನ ಗಿಡ, ಮರಗಳಿಗೂ ಹಾನಿ ಉಂಟಾಗಿದೆ. ಹೀಗಾಗಿ ವಾಕರ್ಸ್ ಅಸೋಸಿಯೇಷನ್​​ನಿಂದ ಆರ್‌ಸಿಬಿ, ಡಿಎನ್‌ಎ ಕಂಪನಿ, ಕೆಎಸ್‌ಸಿಎ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈಗಾಗಲೇ ಪ್ರಕರಣದಲ್ಲಿ ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಹಾಗೂ ಡಿಎನ್‌ಎ ಕಂಪನಿ ವ್ಯವಸ್ಥಾಪಕ ಕಿರಣ್ ಸೇರಿ ನಾಲ್ವರ ಬಂಧನವಾಗಿದೆ.

ಕಬ್ಬನ್ ಪಾರ್ಕ್‌ನ ಗಿಡ-ಮರಗಳಿಗೆ ಹಾನಿ; ಆರ್‌ಸಿಬಿ ವಿರುದ್ಧ ದೂರು ದಾಖಲು

Profile Abhilash BC Jun 8, 2025 2:55 PM

ಬೆಂಗಳೂರು: ಹನ್ನೊಂದು ಮಂದಿ ಆರ್‌ಸಿಬಿ(RCB victory parade stampede) ಅಭಿಮಾನಿಗಳನ್ನು(Bengaluru Stampede) ಬಲಿ ಪಡೆದ, ಚಿನ್ನಸ್ವಾಮಿ ಕ್ರೀಡಾಂಗಣ(m chinnaswamy stadium) ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು ಹಲವರ ತಲೆದಂಡವಾಗಿದೆ. ಪ್ರಕರಣದಲ್ಲಿ ಕೆಎಸ್‌ಸಿಎ ಆಡಳಿತ ಮಂಡಳಿ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಆದೇಶಿಸಿದೆ. ಹೀಗಾಗಿ ಬಂಧನ ಭೀತಿಯಿಂದ ಪಾರಾಗಿರುವ ಕೆಎಸ್‌ಸಿಎಗೆ ಸಿಐಡಿ ತನಿಖೆ ಬಿಸಿ ಮುಟ್ಟಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ(cubbon park) ಗಿಡ ಮರಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ವಾಕರ್ಸ್ ಅಸೋಸಿಯೇಷನ್​​ ಭಾನುವಾರ(ಜೂ.8) ಕಮಿಷನರ್‌ಗೆ ದೂರು ನೀಡಿದೆ.

ಜನರ ಕಾಲ್ತುಳಿತದಿಂದ ಕಬ್ಬನ್​ ಪಾರ್ಕ್​​ನ ಗಿಡ, ಮರಗಳಿಗೂ ಹಾನಿ ಉಂಟಾಗಿದೆ. ಹೀಗಾಗಿ ವಾಕರ್ಸ್ ಅಸೋಸಿಯೇಷನ್​​ನಿಂದ ಆರ್‌ಸಿಬಿ, ಡಿಎನ್‌ಎ ಕಂಪನಿ, ಕೆಎಸ್‌ಸಿಎ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈಗಾಗಲೇ ಪ್ರಕರಣದಲ್ಲಿ ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಹಾಗೂ ಡಿಎನ್‌ಎ ಕಂಪನಿ ವ್ಯವಸ್ಥಾಪಕ ಕಿರಣ್ ಸೇರಿ ನಾಲ್ವರ ಬಂಧನವಾಗಿದೆ.

ಶನಿವಾರ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಯ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ನೀಡಿದ್ದರು. ಕಾರ್ಯದರ್ಶಿ ಹುದ್ದೆಯನ್ನು ಎ. ಶಂಕರ್, ಖಜಾಂಚಿ ಹುದ್ದೆಯನ್ನು ಇ.ಎಸ್.ಜಯರಾಂ ತೊರೆದಿದ್ದು, ‘ಕಾಲ್ತುಳಿತ ಘಟನೆಯಲ್ಲಿ ನಮ್ಮ ಪಾತ್ರ ಇಲ್ಲದಿದ್ದರೂ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇವೆ’ ಎಂದು ಕೆಎಸ್‌ಸಿಎ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ IPL 2025: ಈ ಒಂದೇ ಒಂದು ಕಾರಣದಿಂದಾಗಿ ಭಾರತಕ್ಕೆ ಮರಳಲು ಸಾಧ್ಯವಾಗಿಲ್ಲ ಎಂದ ಮಿಚೆಲ್‌ ಸ್ಟಾರ್ಕ್‌!

ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಾಲ್ವರು ಆರೋಪಿಗಳನ್ನು ಹೆಚ್ಚಿನ ತನಿಖೆ ಸಲುವಾಗಿ ಸೋಮವಾರ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಈ ಸಂಬಂಧ ನ್ಯಾಯಾಲಯದಿಂದ ಬಾಡಿ ವಾರೆಂಟ್‌ಗೆ ಸಿಐಡಿ ಅರ್ಜಿ ಸಲ್ಲಿಸಲಿದೆ.