Saturday, 27th July 2024

ಮೂರನೇ ಟೆಸ್ಟ್ ಮುನ್ನ ರವೀಂದ್ರ ಜಡೇಜಾ, ಚೇತೇಶ್ವರ ಪೂಜಾರಗೆ ಗೌರವ ಸನ್ಮಾನ

ರಾಜ್​ಕೋಟ್​: ಇಂಗ್ಲೆಂಡ್​ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ರವೀಂದ್ರ ಜಡೇಜಾ ಮತ್ತು ಚೇತೇಶ್ವರ ಪೂಜಾರ ಅವರಿಗೆ ಗೌರವ ಸನ್ಮಾನ ಮಾಡಲಿದೆ.

ಭಾರತ ಕ್ರಿಕೆಟ್​ಗೆ ನೀಡಿದ ಸಾಧನೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ ಎಂದು ಎಸ್​ಸಿಎ ಅಧ್ಯಕ್ಷ ಜಯದೇವ್ ಶಾ ಹೇಳಿದ್ದಾರೆ.

ಫೆ.14 ರಂದು ಸೌರಾಷ್ಟ್ರ ಕ್ರಿಕೆಟ್​ ಸ್ಟೇಡಿಯಂನ ಹೊಸ ಹೆಸರನ್ನು ಅನಾವರಣಗೊಳಿಸುವ ಸಮಾರಂಭದಲ್ಲಿ ಜಡೇಜಾ ಮತ್ತು ಪೂಜಾರ ಅವರನ್ನು ಗೌರವಿಸಲಾಗುದು ಎಂದು ಜಯದೇವ್ ಶಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪೂಜಾರ ಅವರು ಎಲೈಟ್ 100-ಟೆಸ್ಟ್ ಕ್ಲಬ್‌ಗೆ ಪ್ರವೇಶಿಸಿದ ಕೇವಲ ಹದಿಮೂರನೇ ಭಾರತೀಯ ಆಟಗಾರರಾಗಿದ್ದಾರೆ. ಜಡೇಜಾ ಅವರು ಎಲ್ಲ ಮಾದರಿಯ ಕ್ರಿಕೆಟ್​ನಲ್ಲಿ ಭಾರತದ ಮ್ಯಾಚ್ ವಿನ್ನರ್ ಮತ್ತು ಪ್ರಸ್ತುತ ಐಸಿಸಿ ಟೆಸ್ಟ್ ಆಲ್-ರೌಂಡರ್ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿದ್ದಾರೆ.

ಸೌರಾಷ್ಟ್ರ ಕ್ರಿಕೆಟ್‌ ಸಂಸ್ಥೆಯ ಕ್ರೀಡಾಂಗಣದ ಹೆಸರು ನಾಮಕರಣವಾಗಲಿದೆ. ಭಾರತ ಹಾಗೂ ಇಂಗ್ಲೆಂಡ್‌ ನಡುವಿನ 3ನೇ ಟೆಸ್ಟ್ ಫೆಬ್ರವರಿ 14ರಂದು ಈ ಕ್ರೀಡಾಂಗಣಕ್ಕೆ ಬಿಸಿಸಿಐನ ಮಾಜಿ ಕಾರ್ಯದರ್ಶಿ, ಹಿರಿಯ ಕ್ರಿಕೆಟ್‌ ಆಡಳಿತಗಾರ ನಿರಂಜನ್‌ ಶಾ ಹೆಸರನ್ನು ಇಡಲಾಗುವುದು. 2013ರಲ್ಲಿ ಉದ್ಘಾಟನೆ ಗೊಂಡಿರುವ ಕ್ರೀಡಾಂಗಣದಲ್ಲಿ ಈ ವರೆಗೂ 2 ಟೆಸ್ಟ್‌, 4 ಏಕದಿನ, 5 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿವೆ.

ನಿರಂಜನ್‌ ಶಾ ಅವರು ಭಾರತ ತಂಡವನ್ನು ಪ್ರತಿನಿಧಿಸದಿದ್ದರೂ ದೇಶಿಯ ಕ್ರಿಕೆಟ್​ನಲ್ಲಿ ಮತ್ತು ಬಿಸಿಸಿಐನಲ್ಲಿ ಅಪಾರ ಕೊಡುಗೆ ಸಲ್ಲಿಸಿದ್ದಾರೆ. ಸೌರಾಷ್ಟ್ರ ಕ್ರಿಕೆಟ್‌ಗೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರ ಹೆಸರನ್ನು ಸ್ಟೇಡಿಯಂಗೆ ಇಡಲು ನಿರ್ಧರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!