ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Maharaja Trophy: ಖಾಲಿ ಚಿನ್ನಸ್ವಾಮಿಯಲ್ಲಿ ಮಹಾರಾಜ ಟ್ರೋಫಿ ಕ್ರಿಕೆಟ್‌ ಟೂರ್ನಿ

ಕಾಲ್ತುಳಿತ ದುರ್ಘಟನೆ ನಡೆ ಬಳಿಕ ಕೆಎಸ್‌ಸಿಎ ಕಾರ್ಯದರ್ಶಿಯಾಗಿದ್ದ ಎ. ಶಂಕರ್ ಮತ್ತು ಖಜಾಂಚಿ ಇ.ಎಸ್. ಜಯರಾಮ್ ಅವರು ಈ ಘಟನೆಯ ನಂತರ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಪ್ರಕರಣದ ಕುರಿತ ವಿಚಾರಣೆಯು ರಾಜ್ಯ ಹೈಕೋರ್ಟ್ ಮತ್ತು ಕೇಂದ್ರಿಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಯಲ್ಲಿ ನಡೆಯುತ್ತಿದೆ.

ಖಾಲಿ ಚಿನ್ನಸ್ವಾಮಿಯಲ್ಲಿ ಮಹಾರಾಜ ಟ್ರೋಫಿ ಕ್ರಿಕೆಟ್‌ ಟೂರ್ನಿ

Profile Abhilash BC Jul 12, 2025 11:30 AM

ಬೆಂಗಳೂರು: ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಟ್ರೋಫಿ ವಿಜಯೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರ್ಘಟನೆ ನಡೆದಿತ್ತು. ಅದರಲ್ಲಿ 11 ಜನರು ದುರ್ಮರಣ ಹೊಂದಿದ್ದರು. ಇದೇ ಕಾರಣಕ್ಕೆ ಈ ಬಾರಿಯ ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಗೆ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶವಿರುವುದಿಲ್ಲ. ಪಂದ್ಯಗಳನ್ನು ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸುವುದಾಗಿ ಕೆಎಸ್‌ಸಿಎ ಖಚಿತಪಡಿಸಿದೆ.

ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯು ಆಗಸ್ಟ್ 11 ರಿಂದ 27ರವರೆಗೆ ನಡೆಯಲಿದೆ. ಭಾರತ ತಂಡದ ಆಟಗಾರರಾದ ಕರುಣ್ ನಾಯರ್, ಪ್ರಸಿದ್ಧಕೃಷ್ಣ ಮತ್ತು ಮಯಂಕ್ ಅಗರ್ವಾಲ್‌ ಅವರು ಟೂರ್ನಿಯಲ್ಲಿ ಆಡಲಿದ್ದಾರೆ.

ಆಟಗಾರರ ಹರಾಜು ಪ್ರಕ್ರಿಯೆಯು ಜುಲೈ 15ರಂದು ನೆಯಲಿದೆ. ಪ್ರತಿಯೊಂದು ತಂಡವು ಕನಿಷ್ಠ 16 ಮತ್ತು ಗರಿಷ್ಠ 18 ಆಟಗಾರರನ್ನು ಹೊಂದಬಹುದಾಗಿದೆ. ಒಟ್ಟು ಆರು ತಂಡಗಳು ಆಡಲಿದ್ದು, ಟೂರ್ನಿಯ ಎಲ್ಲ ಪಂದ್ಯಗಳೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಇದನ್ನೂ ಓದಿ Bengaluru Stampede: "ಎಲ್ಲವನ್ನೂ ನಿಭಾಯಿಸಲು ಪೊಲೀಸರೇನು ದೇವರಲ್ಲ"; ಬೆಂಗಳೂರು ಕಾಲ್ತುಳಿತಕ್ಕೆ ಆರ್‌ಸಿಬಿ ಕಾರಣ ಎಂದ CAT

ಕಾಲ್ತುಳಿತ ದುರ್ಘಟನೆ ನಡೆ ಬಳಿಕ ಕೆಎಸ್‌ಸಿಎ ಕಾರ್ಯದರ್ಶಿಯಾಗಿದ್ದ ಎ. ಶಂಕರ್ ಮತ್ತು ಖಜಾಂಚಿ ಇ.ಎಸ್. ಜಯರಾಮ್ ಅವರು ಈ ಘಟನೆಯ ನಂತರ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಪ್ರಕರಣದ ಕುರಿತ ವಿಚಾರಣೆಯು ರಾಜ್ಯ ಹೈಕೋರ್ಟ್ ಮತ್ತು ಕೇಂದ್ರಿಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಯಲ್ಲಿ ನಡೆಯುತ್ತಿದೆ.