ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

'ಶಿಕ್ಷಣ ಎಲ್ಲರಿಗೂ ಸೇರಿದ್ದು'; ಸಿಜೆಪಿ ಪ್ರತಿಭಟನೆಗಳಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಪ್ರತಿಕ್ರಿಯೆ

CJP protests: ವಿದ್ಯಾರ್ಥಿಗಳು ತಾಳ್ಮೆಯಿಂದಿರಬೇಕು ಮತ್ತು ಸರ್ಕಾರದ ಮೇಲೆ ನಂಬಿಕೆ ಇಡಬೇಕು ಎಂದು ಕ್ರಿಕೆಟಿಗ ಶಿಖರ್ ಧವನ್ ಒತ್ತಾಯಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹೇಳಿಕೆ ನೀಡಿರುವ ಧವನ್, ಪ್ರತಿಭಟನೆ ನಡೆಸುತ್ತಿರುವ ಯುವಕರನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯವಾದರೂ, ದೇಶದ ಸಂಸ್ಥೆಗಳು ಮತ್ತು ಆಡಳಿತ ಸರ್ಕಾರವನ್ನು ನಂಬುವುದು ಸಹ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

Abhinav Bindra and shikhar dhawan

ನವದೆಹಲಿ, ಜು.23: ಗುರುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಬಲವಾದ ಶಿಕ್ಷಣ ವ್ಯವಸ್ಥೆಗೆ ಕರೆ ನೀಡಿದರು. ಈ ವಿಷಯವು ರಾಜಕೀಯ ವಿಭಜನೆಗಳನ್ನು ಮೀರಿದೆ ಎಂದು ಒತ್ತಿ ಹೇಳಿದರು. ಮಾಜಿ ಕ್ರಿಕೆಟಿಗ ಶಿಖರ್ ಧವನ್ ವಿದ್ಯಾರ್ಥಿಗಳು ತಾಳ್ಮೆಯಿಂದಿರಬೇಕು ಮತ್ತು ಸರ್ಕಾರದ ಮೇಲೆ ನಂಬಿಕೆ ಇಡಬೇಕು ಎಂದು ಒತ್ತಾಯಿಸಿದ್ದಾರೆ.

2026 ರ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಕುರಿತು ಪ್ರತಿಭಟನೆಗಳು ರಾಷ್ಟ್ರವ್ಯಾಪಿ ಗಮನಸೆಳೆಯುತ್ತಿವಂತೆಯೇ ಭಾರತದ ಹಲವು ಕ್ರೀಡಾಪಟುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ರಾಜಕೀಯ ನಿಲುವು ತೆಗೆದುಕೊಳ್ಳದೆ ಅಥವಾ ಪ್ರತಿಭಟನಾಕಾರರು ಮತ್ತು ಅಧಿಕಾರಿಗಳ ನಡುವಿನ ಘರ್ಷಣೆಯ ಬಗ್ಗೆ ನೇರವಾಗಿ ಪ್ರತಿಕ್ರಿಯಿಸದೆ, ಯುವ ಭಾರತೀಯರಿಗೆ ಶೈಕ್ಷಣಿಕ ಅವಕಾಶಗಳನ್ನು ರಕ್ಷಿಸುವ ಮಹತ್ವದ ಬಗ್ಗೆ ಬಿಂದ್ರಾ ಮಾತನಾಡಿದರು.

"ನಾನು ನನ್ನನ್ನು ಎಂದಿಗೂ ರಾಜಕೀಯ ವ್ಯಕ್ತಿ ಎಂದು ಪರಿಗಣಿಸಿಲ್ಲ. ಆದರೆ ನಾವು ಎಲ್ಲೇ ನಿಂತಿದ್ದರೂ ಕೆಲವು ಸಮಸ್ಯೆಗಳು ನಮ್ಮೆಲ್ಲರಿಗೂ ಸೇರಿವೆ ಎಂದು ನಾನು ನಂಬುತ್ತೇನೆ. ಶಿಕ್ಷಣವು ಅವುಗಳಲ್ಲಿ ಒಂದು" ಎಂದು ಬಿಂದ್ರಾ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.



"ರಾಷ್ಟ್ರದ ಅಳತೆಯು ಅದರ ಆರ್ಥಿಕತೆ ಅಥವಾ ಅದರ ಸಾಧನೆಗಳಲ್ಲಿ ಮಾತ್ರವಲ್ಲ, ಅದರ ಯುವಜನರಿಗೆ ಸೃಷ್ಟಿಸುವ ಅವಕಾಶಗಳಲ್ಲಿ ಕಂಡುಬರುತ್ತದೆ. ಆತ್ಮವಿಶ್ವಾಸವನ್ನು ಪ್ರೇರೇಪಿಸುವ, ಅರ್ಹತೆಗೆ ಪ್ರತಿಫಲ ನೀಡುವ ಮತ್ತು ಕುತೂಹಲವನ್ನು ಪೋಷಿಸುವ ಶಿಕ್ಷಣ ವ್ಯವಸ್ಥೆಯು ರಾಷ್ಟ್ರದ ಶ್ರೇಷ್ಠ ಸಾಮರ್ಥ್ಯಗಳಲ್ಲಿ ಒಂದಾಗಿದೆ, ”ಎಂದು ಬಿಂದ್ರಾ ಬರೆದಿದ್ದಾರೆ.

ಕಾಮನ್‌ವೆಲ್ತ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭಕ್ಕೂ ಮುನ್ನವೇ ಭಾರತದ ಮೊದಲ ಪದಕ ದೃಢಪಡಿಸಿದ ಲವ್ಲಿನಾ ಬೊರ್ಗೊಹೈನ್

"ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಿರಂತರವಾಗಿ ಬಲಪಡಿಸಲು ನಾವೆಲ್ಲರೂ ಒಗ್ಗೂಡಿ ಒಟ್ಟಾಗಿ ಕೆಲಸ ಮಾಡಬಹುದು ಎಂದು ನಾನು ಭಾವಿಸುತ್ತೇನೆ, ಇದರಿಂದಾಗಿ ಅದು ಮುಂದಿನ ಪೀಳಿಗೆಗೆ ಅವಕಾಶ, ನಾವೀನ್ಯತೆ ಮತ್ತು ಭರವಸೆಯ ಮೂಲವಾಗಿ ಉಳಿಯುತ್ತದೆ" ಎಂದು ಅವರು ಬರೆದಿದ್ದಾರೆ.

ಸರ್ಕಾರದ ಮೇಲೆ ನಂಬಿಕೆ ಇಡಿ; ಧವನ್‌

ವಿದ್ಯಾರ್ಥಿಗಳು ತಾಳ್ಮೆಯಿಂದಿರಬೇಕು ಮತ್ತು ಸರ್ಕಾರದ ಮೇಲೆ ನಂಬಿಕೆ ಇಡಬೇಕು ಎಂದು ಕ್ರಿಕೆಟಿಗ ಶಿಖರ್ ಧವನ್ ಒತ್ತಾಯಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹೇಳಿಕೆ ನೀಡಿರುವ ಧವನ್, ಪ್ರತಿಭಟನೆ ನಡೆಸುತ್ತಿರುವ ಯುವಕರನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯವಾದರೂ, ದೇಶದ ಸಂಸ್ಥೆಗಳು ಮತ್ತು ಆಡಳಿತ ಸರ್ಕಾರವನ್ನು ನಂಬುವುದು ಸಹ ಮುಖ್ಯವಾಗಿದೆ ಎಂದು ಹೇಳಿದ್ದಾರೆ.



"ನಮ್ಮ ಯುವಕರು ನಮ್ಮ ರಾಷ್ಟ್ರದ ಭವಿಷ್ಯ. ಅವರ ಕನಸುಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ, ಆದರೆ ಅದೇ ಸಮಯದಲ್ಲಿ, ಕಷ್ಟದ ಸಮಯದಲ್ಲಿ ತಾಳ್ಮೆಯನ್ನು ಕಾಪಾಡಿಕೊಳ್ಳುವುದು ಮತ್ತು ದೇಶದ ಸಂಸ್ಥೆಗಳು ಮತ್ತು ಸರ್ಕಾರದ ಮೇಲೆ ನಂಬಿಕೆ ಇಡುವುದು ಅಷ್ಟೇ ಮುಖ್ಯ" ಎಂದು ಧವನ್ ಹೇಳಿದರು.

"ಪ್ರತಿಯೊಂದು ಸವಾಲಿಗೂ ಪರಿಹಾರವು ತಾಳ್ಮೆಯಿಂದ ಹೊರಹೊಮ್ಮುತ್ತದೆ ಎಂದು ನಾನು ನಂಬುತ್ತೇನೆ. ಭಾರತ ಯಾವಾಗಲೂ ಮುಂದೆ ಸಾಗಿದೆ ಮತ್ತು ಪ್ರಗತಿಯನ್ನು ಮುಂದುವರಿಸುತ್ತದೆ" ಎಂದು ಧವನ್ ಹೇಳಿದರು.