Thursday, 19th September 2024

ವೃತ್ತಿಪರ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಾವಣಗೆರೆ ಎಕ್ಸ್‌ಪ್ರೆಸ್ ಆರ್.ವಿನಯ್ ಕುಮಾರ್

ಬೆಂಗಳೂರು: ಭಾರತದ ಕ್ರಿಕೆಟಿಗ, ಕರ್ನಾಟದ ಮಾಜಿ ನಾಯಕ ದಾವಣಗೆರೆ ಎಕ್ಸ್‌ಪ್ರೆಸ್ ಖ್ಯಾತಿಯ ಆರ್.ವಿನಯ್ ಕುಮಾರ್ ಅಂತರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ವಿನಯ್ ಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದು, ಮಿಶ್ರ ಭಾವನೆಗಳೊಂದಿಗೆ ಅಂತರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದೊಂದು ಸುಲಭ ನಿರ್ಧಾರವಾಗಿರಲಿಲ್ಲ. ಆದರೆ ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನ ದಂತೆ ನನ್ನ ಜೀವನದಲ್ಲೂ ದಿನ ಬಂದಿದೆ ಎಂದು ಭಾವುಕ ಸಂದೇಶದಲ್ಲಿ ತಿಳಿಸಿದರು.

ನನ್ನ ಕ್ರೀಡಾ ಜೀವನ ಜೀವನದುದ್ಧಕ್ಕೂ ನೆನಪಿಸುವ ಅನೇಕ ಘಟನೆಗಳಿಂದ ತುಂಬಿಕೊಂಡಿದೆ. ನನ್ನ ಕನಸು ನನಸಾಗಿಸಲು ದಾವಣಗೆರೆಯಿಂದ ಬೆಂಗಳೂರಿಗೆ ಆಗಮಿಸಿದ್ದೆ. ರಾಜ್ಯ ತಂಡವನ್ನು ಪ್ರತಿನಿಧಿಸಲು ಅವಕಾಶ ಮಾಡಿಕೊಟ್ಟ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಅಭಾರಿಯಾಗಿದ್ದೇನೆ.

ಈ ಸಂದರ್ಭದಲ್ಲಿ ಬಿಸಿಸಿಐಗೂ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ. ದೇಶದ ಪರ ಆಡುವುದು ಪತಿಯೊಬ್ಬ ಕ್ರೀಡಾಪಟುವಿನ ಕಟ್ಟಕಡೆಯ ಕನಸಾಗಿದೆ. ಭಾರತ ತಂಡದ ನೀಲಿ ಜೆರ್ಸಿ ಧರಿಸಿದ ನೆನಪುಗಳು ಸದಾ ನನ್ನ ಹೃದಯಕ್ಕೆ ಹತ್ತಿರವಾಗಿದೆ.

ಏರಿಳಿತಗಳು, ಯಶಸ್ಸು- ವೈಫಲ್ಯ, ಒಳ್ಳೆಯ ದಿನಗಳು, ಕೆಟ್ಟ ದಿನಗಳು. ಇವೆಲ್ಲವೂ ಜೀವನದಲ್ಲಿ ಉತ್ತಮ ವ್ಯಕ್ತಿಯಾಗಿ ಬೆಳೆದು ಬರುವಲ್ಲಿ ನೆರವಾಗಿದೆ. ಓರ್ವ ಕ್ರಿಕೆಟಿಗನಾಗಿ ಸಾಧಿಸಿರುವ ಎಲ್ಲ ಅನುಭವಗಳ ಬಗ್ಗೆ ಹೆಮ್ಮೆಯಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *