IPL 2025: ಟ್ರೋಫಿ ಗೆದ್ದರೆ ರಜೆ ಘೋಷಿಸಲು ಸಿದ್ದರಾಮಯ್ಯಗೆ ಪತ್ರ ಬರೆದ ಆರ್ಸಿಬಿ ಅಭಿಮಾನಿ
ಜೂನ್ 3ರಂದು ನಡೆಯುವ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡ ಗೆದ್ದು ಟ್ರೋಫಿ ಕೈವಶ ಮಾಡಿದರೆ ಆ ದಿನವನ್ನು ಸಾರ್ವತ್ರಿಕ ರಜೆ ಎಂದು ಘೋಷಿಸಲು ಪತ್ರ ಬರೆದಿದ್ದಾನೆ. ಶಿವನಂದ ಮಲ್ಲನ್ನವರ ಎನ್ನುವ ಅಭಿಮಾನಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದವರು.


ಬೆಂಗಳೂರು: 18 ವರ್ಷಗಳ ಐಪಿಎಲ್(IPL 2025) ಕಪ್ ಗೆಲುವಿನ ಆಸೆ ಈಡೇರಿಸಲು ಆರ್ಸಿಬಿ ಇನ್ನೊಂದು ಮೆಟ್ಟಿಲು ಹತ್ತಬೇಕಿದೆ. ಗುರುವಾರ ನಡೆದಿದ್ದ ಪಂಜಾಬ್ ಕಿಂಗ್ಸ್(RCB vs PBKS) ವಿರುದ್ಧದ ಮೊದಲ ಕ್ವಾಲಿಫೈಯರ್(IPL Qualifier 1) ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಆರ್ಸಿಬಿ ಫೈನಲ್(RCB Final) ಪ್ರವೇಶಿಸಿದೆ. ನಾಲ್ಕನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಆರ್ಸಿಬಿ ಈ ಪ್ರಯತ್ನದಲ್ಲಾದರೂ ಕಪ್ ಗೆಲ್ಲಲಿ ಎಂದು ಅಭಿಮಾನಿಗಳು ಪ್ರಾರ್ಥಿಸತೊಡಗಿದ್ದಾರೆ. ಇದರ ಮಧ್ಯೆ ಆರ್ಸಿಬಿ ಅಭಿಮಾನಿಯೊಬ್ಬ ಸಿಎಂ ಸಿದ್ದರಾಮಯ್ಯ(cm siddaramaiah) ಅವರಿಗೆ ಬರೆದ ಪ್ರವೊಂದು ಭಾರೀ ವೈರಲ್ ಆಗಿದೆ.
ಜೂನ್ 3ರಂದು ನಡೆಯುವ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡ ಗೆದ್ದು ಟ್ರೋಫಿ ಕೈವಶ ಮಾಡಿದರೆ ಆ ದಿನವನ್ನು ಸಾರ್ವತ್ರಿಕ ರಜೆ ಎಂದು ಘೋಷಿಸಲು ಪತ್ರ ಬರೆದಿದ್ದಾನೆ. ಶಿವನಂದ ಮಲ್ಲನ್ನವರ ಎನ್ನುವ ಅಭಿಮಾನಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದವರು.
ಪತ್ರದಲ್ಲಿ ಏನಿದೆ?
ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ಫೈನಲ್ಗೆ ಹೋಗಿ ಕಪ್ ಗೆದ್ದರೆ ಕರ್ನಾಟಕ ಸರ್ಕಾರರಿಂದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ದಿನವನ್ನು ಕರ್ನಾಟಕ ರಾಜ್ಯ ಆರ್ಸಿಬಿ ಫ್ಯಾನ್ಸ್ ಹಬ್ಬವೆಂದು ಅಧಿಕೃತವಾಗಿ ಘೋಷಣೆ ಮಾಡಬೇಕು. ಪ್ರತಿ ವರ್ಷ ಸರ್ಕಾರಿ ರಜೆಯನ್ನು ನೀಡಬೇಕು " ಎಂದು ಪತ್ರದಲ್ಲಿ ಅಭಿಮಾನಿ ಒತ್ತಾಯಿಸಿದ್ದಾರೆ.
ಅಭಿಮಾನಿಗಳ ಬಹು ದಿನಗಳ ಬೇಡಿಕೆಯನ್ನು ಆರ್ಸಿಬಿ ಈಡೇರಿಸಿದರೆ ಸರ್ಕಾರಿ ರಜೆ ಘೋಷಿಸಲು ಪತ್ರದಲ್ಲಿ ಮನವಿ ಮಾಡಲಾಗಿದೆ. ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ಜಿಲ್ಲೆಯಲ್ಲಿ ಯಾವ ರೀತಿ ಆಚರಿಸಲಾಗುತ್ತದೋ, ಅದೇ ರೀತಿ ಆರ್ಸಿಬಿ ಫ್ಯಾನ್ಸ್ ಹಬ್ಬ ಆಚರಿಸಲು ಸರ್ಕಾರ ಅನುವು ಮಾಡಿಕೊಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರಿ ರಜೆ ಹಾಗೂ ಆರ್ಸಿಬಿ ಫ್ಯಾನ್ಸ್ ಹಬ್ಬ ಆಚರಿಸಲು ಅವಕಾಶ ನೀಡಬೇಕು ಎಂದು ರಾಜ್ಯದ ಪ್ರತಿ ಜಿಲ್ಲೆಯ ವತಿಯಿಂದ ಆರ್ಸಿಬಿ ಪರವಾಗಿ ಪತ್ರ ಬರೆದಿರುವುದಾಗಿ ಶಿವಾನಂದ ಹೇಳಿದ್ದಾರೆ.
RCB ಫೈನಲ್ ಗೆ ಹೋಗಿ, ಕಪ್ ಗೆದ್ದರೆ ರಜೆ ಘೋಷಣೆ ಮಾಡಿ ಹಾಗೂ ಆ ದಿನವನ್ನು "ಕರ್ನಾಟಕ ರಾಜ್ಯ RCB Fans ಹಬ್ಬ" ಅಂತಾ ಆಚರಿಸಿ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಬೆಳಗಾವಿ ಜಿಲ್ಲೆಯ ಗೋಕಾಕಿನ RCB ಅಭಿಮಾನಿ. #belagavika #belagavi pic.twitter.com/KHEhqXvV6g
— Belagavi - ಬೆಳಗಾವಿ (@BelagaviKA) May 29, 2025
ಚಂಡೀಗಢದ ಮುಲ್ಲಾನ್ಪುರ ಕ್ರೀಡಾಂಗಣದಲ್ಲಿ ಗುರುವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ಕಿಂಗ್ಸ್ ಶೋಚನೀಯ ಬ್ಯಾಟಿಂಗ್ ಪ್ರದರ್ಶನದ ಮೂಲಕ 14.1 ಓವರ್ನಲ್ಲಿ 101 ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಆರ್ಸಿಬಿ 10 ಓವರಲ್ಲಿ 2 ವಿಕೆಟ್ ನಷ್ಟಕ್ಕೆ 106 ರನ್ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತ್ತು.
ಇದನ್ನೂ ಓದಿ IPL 2025: ʻಆರ್ಸಿಬಿ ಈ ಸಲ ಕಪ್ ಗೆಲ್ಲುವುದು ಪಕ್ಕಾʼ-ಶೇನ್ ವ್ಯಾಟ್ಸನ್ ಭವಿಷ್ಯ ನಿಜವಾಗುತ್ತಾ?