ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಚಿನ್ನಸ್ವಾಮಿಯಲ್ಲೇ ಐಪಿಎಲ್ ಪಂದ್ಯ ಆಡುವ ಸುಳಿವು ನೀಡಿದ ಆರ್‌ಸಿಬಿ

RCB To Play M Chinnaswamy Stadium:‌ ಚಿನ್ನಸ್ವಾಮಿ ಪಂದ್ಯಗಳನ್ನು ನಡೆಸುವ ವಿಚಾರದಲ್ಲಿ ಸರ್ಕಾರ ನ್ಯಾ.ಮೈಕಲ್‌ ಕುನ್ಹಾ ಸಮಿತಿಯನ್ನು ರಚಿಸಿ ವರದಿ ಕೇಳಿತ್ತು. ಇತ್ತೀಚೆಗೆ ಸಮಿತಿಯು ವರದಿಯನ್ನೂ ಸಲ್ಲಿಸಿತ್ತು. ಆದರೆ ವರದಿಯಲ್ಲಿರುವ ಕೆಲ ಅಂಶಗಳನ್ನು ಫ್ರಾಂಚೈಸಿ ಒಪ್ಪಿಲ್ಲ ಎನ್ನಲಾಗಿತ್ತು.

RCB To Play IPL 2026 Matches At M Chinnaswamy Stadium

ಬೆಂಗಳೂರು, ಮಾ.3: ರಾಯಲ್ ಚಾಲೆಂಜರ್ಸ್‌ ಬೆಂಗಳೂರು(RCB) ಫ್ರಾಂಚೈಸಿಯು ಈ ಬಾರಿ ಐಪಿಎಲ್‌(IPL 2026)ನಲ್ಲಿ ತನ್ನ ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಆಡುವ ಬಗ್ಗೆ ಫ್ರಾಂಚೈಸಿ ಸುಳಿವೊಂದನ್ನು ಬಿಟ್ಟುಕೊಟ್ಟಿದೆ. ಅಧಿಕೃತ ಟ್ವಿಟರ್‌ ಎಕ್ಸ್‌ ಖಾತೆಯಲ್ಲಿ "ನಮ್ಮ ಹೃದಯ ಇರುವ ಸ್ಥಳವೇ ಮನೆ" ಎಂದು ಪೋಸ್ಟ್‌ ಮಾಡುವ ಮೂಲಕ ತವರಿನಲ್ಲಿ ಪಂದ್ಯಾವಳಿ ಆಡುವ ಸುಳಿವು ನೀಡಿದೆ.

ಕಳೆದ ವರ್ಷ ಜೂನ್‌ನಲ್ಲಿ ನಡೆದ ಭೀಕರ ಕಾಲ್ತುಳಿತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಮುಖ ಪಂದ್ಯ, ಟೂರ್ನಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಇತ್ತೀಚೆಗೆ ರಾಜ್ಯ ಸರ್ಕಾರವು ಚಿನ್ನಸ್ವಾಮಿಯಲ್ಲಿ ಅಂತಾರಾಷ್ಟ್ರೀಯ ಹಾಗೂ ಐಪಿಎಲ್‌ ಪಂದ್ಯಗಳನ್ನು ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ)ಗೆ ಷರತ್ತುಬದ್ಧ ಅನುಮತಿ ನೀಡಿತ್ತು. ಆದರೆ ಆರ್‌ಸಿಬಿಯು ಕೆಲ ಕಾರಣಗಳಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಡಲು ನಿರಾಕರಿಸುತ್ತಿತ್ತು. ಕೆಎಸ್‌ಸಿಎ ಪದಾಧಿಕಾರಿಗಳು ಕೂಡಾ ಚಿನ್ನಸ್ವಾಮಿಯಲ್ಲಿ ಆಡುವಂತೆ ಆರ್‌ಸಿಬಿಗೆ ಮನವಿ ಮಾಡಿದ್ದರೂ ಅದಕ್ಕೆ ಫ್ರಾಂಚೈಸಿಯು ಒಪ್ಪಿರಲಿಲ್ಲ.

ಚಿನ್ನಸ್ವಾಮಿ ಪಂದ್ಯಗಳನ್ನು ನಡೆಸುವ ವಿಚಾರದಲ್ಲಿ ಸರ್ಕಾರ ನ್ಯಾ.ಮೈಕಲ್‌ ಕುನ್ಹಾ ಸಮಿತಿಯನ್ನು ರಚಿಸಿ ವರದಿ ಕೇಳಿತ್ತು. ಇತ್ತೀಚೆಗೆ ಸಮಿತಿಯು ವರದಿಯನ್ನೂ ಸಲ್ಲಿಸಿತ್ತು. ಆದರೆ ವರದಿಯಲ್ಲಿರುವ ಕೆಲ ಅಂಶಗಳನ್ನು ಫ್ರಾಂಚೈಸಿ ಒಪ್ಪಿಲ್ಲ ಎನ್ನಲಾಗಿತ್ತು.



ಹೊಸ ಮಾಲಿಕತ್ವ

ಆರ್‌ಸಿಬಿ ತಂಡದ ಮಾರಾಟ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಮಾರ್ಚ್​ ಮಧ್ಯಭಾಗದಲ್ಲಿ ಹೊಸ ಮಾಲೀಕರು ಯಾರೆಂದು ಖಚಿತವಾಗಲಿದೆ. ಆರ್​ಸಿಬಿ ಒಡೆತನ ಹೊಂದಿರುವ ಡಿಯಾಜಿಯೋ ಕಂಪನಿ, ಕೊನೇ ಹಂತದ ಬಿಡ್ಡಿಂಗ್​ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರ ಪಟ್ಟಿಯನ್ನು ಈಗಾಗಲೆ ಅಂತಿಮಗೊಳಿಸಿದೆ. ಮಾರ್ಚ್​ 10ರಂದು ಅಂತಿಮ ಹಂತದ ಬಿಡ್ಡಿಂಗ್​ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ. 2026ರ ಮಾರ್ಚ್​ 31ರೊಳಗೆ ಆರ್​ಸಿಬಿ ಮಾರಾಟ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಡಿಯಾಜಿಯೋ ಕಳೆದ ವರ್ಷ ನವೆಂಬರ್​ನಲ್ಲೇ ತಿಳಿಸಿತ್ತು.

ಭಾರತ vs ಅಫ್ಘಾನಿಸ್ತಾನ ಕ್ರಿಕೆಟ್‌ ಸರಣಿ ವೇಳಾಪಟ್ಟಿ ಪ್ರಕಟ

ಆರ್​ಸಿಬಿಯ ಹಾಲಿ ಮಾಲೀಕರು 18,186 ಕೋಟಿ ರೂ. (2 ಶತಕೋಟಿ ಡಾಲರ್​) ಮೌಲ್ಯ ನಿಗದಿಪಡಿಸಿದ್ದಾರೆ. ಆದರೆ ಇತ್ತೀಚೆಗೆ ನಡೆದ ಪ್ರಾಥಮಿಕ ಬಿಡ್ಡಿಂಗ್​ ಪ್ರಕ್ರಿಯೆಯಲ್ಲಿ 13,640 ಕೋಟಿ ರೂ.ನಿಂದ 16.368 ಕೋಟಿ ರೂ.ವರೆಗೆ (1.5ರಿಂದ 1.8 ಶತಕೋಟಿ ಡಾಲರ್​) ಬಿಡ್​ ಬಂದಿತ್ತು ಎನ್ನಲಾಗಿದೆ. ಹೀಗಾಗಿ ಬಿಡ್ಡರ್​ಗಳು ಕೊನೇ ಹಂತದಲ್ಲಿ ತಮ್ಮ ಬಿಡ್​ ಮೊತ್ತವನ್ನು ಪರಿಷ್ಕರಿಸುವ ನಿರೀಕ್ಷೆ ಇದೆ.

ಮ್ಯಾಂಚೆಸ್ಟರ್​ ಯುನೈಟೆಡ್​ ಸಹ-ಮಾಲೀಕರಾದ ಅವ್ರಾಮ್​ ಗ್ಲೇಜರ್​, ಸೆರಮ್​ ಇಂಡಿಯಾದ ಸಿಇಒ ಅದರ್​ ಪೂನಾವಾಲ, ಮಣಿಪಾಲ್​ ಗ್ರೂಪ್​ ಚೇರ್ಮನ್​ ಡಾ. ರಂಜನ್​ ಪೈ, ಅಮೆರಿಕದ ಶತಕೋಟಿ ಉದ್ಯಮಿ ಡೇವಿಡ್​ ಬ್ಲಿಟ್ಜರ್​, ಭಾರತದ ಉದ್ಯಮಿಗಳಾದ ಗೌತಮ್​ ಅದಾನಿ, ಪಾರ್ಥ ಜಿಂದಾಲ್​ (ಜೆಎಸ್​ಡಬ್ಲ್ಯು) ಆರ್​ಸಿಬಿ ಖರೀದಿ ರೇಸ್​ನಲ್ಲಿರುವ ಪ್ರಮುಖರು.