Shreyas Iyer: ಆಡುವ ಬಳಗಕ್ಕೆ ಆಯ್ಕೆಯಾದ ರಹಸ್ಯ ಬಿಚ್ಚಿಟ್ಟ ಅಯ್ಯರ್‌

Shreyas Iyer: ಪಂದ್ಯದಲ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತುಕೊಟ್ಟ ಶ್ರೇಯಸ್‌ 30 ಎಸೆತಗಳಲ್ಲೇ ಅರ್ಧಶತಕ ಪೂರ್ಣಗೊಳಿಸಿದರು. ಆದರೆ 36 ಎಸೆತಗಳಲ್ಲಿ 59 ರನ್‌ ಗಳಿಸಿದ್ದಾಗ ಬೆಥೆಲ್‌ ಎಸೆತದಲ್ಲಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ, 2 ಸಿಕ್ಸರ್‌ಗಳಿದ್ದವು.

Shreyas Iyer (5)
Profile Abhilash BC Feb 7, 2025 10:45 AM

ನಾಗ್ಪುರ: ಇಂಗ್ಲೆಂಡ್‌ ವಿರುದ್ಧ ಮೊದಲ ಏಕದಿನ(India vs England 1st ODI) ಪಂದ್ಯದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್‌ ಮೂಲಕ ಟೀಮ್‌ ಇಂಡಿಯಾಕ್ಕೆ ಭರ್ಜರಿ ಕಮ್‌ಬ್ಯಾಕ್‌ ಮಾಡಿದ ಮಧ್ಯಮ ಕ್ರಮಾಂಕದ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌(Shreyas Iyer) ತಾವು ಆಡುವ ಬಳಗಕ್ಕೆ ಆಯ್ಕೆಯಾದ ಅಚ್ಚರಿಯ ಸಂಗತಿಯನ್ನು ತೆರೆದಿಟ್ಟಿದ್ದಾರೆ. ಸಿನೆಮಾ ನೋಡುತ್ತಿದ್ದ ವೇಳೆ ನಾಯಕ ರೋಹಿತ್ ಶರ್ಮ ದಿಢೀರ್‌ ಫೋನ್ ಮಾಡಿ ತಂಡಕ್ಕೆ ಆಯ್ಕೆಯಾದ ಬಗ್ಗೆ ತಿಳಿಸಿದರು ಎಂದರು.

ಪಂದ್ಯದ ಬಳಿಕ ಮಾತನಾಡಿದ ಶ್ರೇಯಸ್‌, 'ನಾನು ತಂಡದ ಭಾಗವಾಗಿದ್ದರೂ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿರಲಿಲ್ಲ. ಹೀಗಾಗಿ ಆರಾಮವಾಗಿ ತಡರಾತ್ರಿ ತನಕ ಸಿನೆಮಾ ನೋಡುತ್ತಿದ್ದೆ. ಇದೇ ವೇಳೆ ರೋಹಿತ್‌ ಕಾಲ್‌ ಮಾಡಿ ವಿರಾಟ್ ಕೊಹ್ಲಿ ಅವರ ಮೊಣಕಾಲು ಊದಿಕೊಂಡಿರುವುದರಿಂದ ಬಹುಶಃ ನೀವು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು ಎಂದು ಹೇಳಿದರು. ಇದಾದ ನಂತರ ನನ್ನ ಕೋಣೆಗೆ ಓಡಿದ ನಾನು ತಕ್ಷಣವೇ ನಿದ್ರೆಗೆ ಜಾರಿದೆ' ಎಂದರು.



ಪಂದ್ಯದಲ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತುಕೊಟ್ಟ ಶ್ರೇಯಸ್‌ 30 ಎಸೆತಗಳಲ್ಲೇ ಅರ್ಧಶತಕ ಪೂರ್ಣಗೊಳಿಸಿದರು. ಆದರೆ 36 ಎಸೆತಗಳಲ್ಲಿ 59 ರನ್‌ ಗಳಿಸಿದ್ದಾಗ ಬೆಥೆಲ್‌ ಎಸೆತದಲ್ಲಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ, 2 ಸಿಕ್ಸರ್‌ಗಳಿದ್ದವು. ಶುಭ್‌ಮನ್‌ ಗಿಲ್‌ ಹಾಗೂ ಶ್ರೇಯಸ್‌ ಅಯ್ಯರ್‌ ಜೋಡಿ 64 ಎಸೆತಗಳಲ್ಲಿ 94 ರನ್‌ಗಳ ಜತೆಯಾಟ ಕೂಡ ನಡೆಸಿದರು. ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಅಯ್ಯರ್‌ ಅವರ ಈ ಪ್ರದರ್ಶನ ಮಧ್ಯಮ ಕ್ರಮಾಂಕದ ಚಿಂತೆಯನ್ನು ಕಡಿಮೆ ಮಾಡಿದೆ.

ವಿದರ್ಭ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ಗುರುವಾರ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ ತಂಡ, 47.4 ಓವರ್‌ಗಳಿಗೆ 248 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಆ ಮೂಲಕ ಎದುರಾಳಿ ಭಾರತ ತಂಡಕ್ಕೆ 249 ರನ್‌ಗಳ ಗುರಿಯನ್ನು ನೀಡಿತ್ತು. ಬಳಿಕ ಗುರಿ ಹಿಂಬಾಲಿಸಿದ ಭಾರತ ತಂಡ, ಮೂವರು ಬ್ಯಾಟ್ಸ್‌ಮನ್‌ಗಳ ಅರ್ಧಶತಕಗಳ ಬಲದಿಂದ 38.4 ಓವರ್‌ಗಳಿಗೆ 251 ರನ್‌ಗಳನ್ನು ಗಳಿಸಿ ಗೆಲುವಿನ ಗಡಿ ದಾಟಿತು.

ಇದನ್ನೂ ಓದಿ IND vs ENG: ʻದಯವಿಟ್ಟು ನಿವೃತ್ತಿ ಪಡೆಯಿರಿʼ-ರೋಹಿತ್‌ ಶರ್ಮಾ ವಿರುದ್ದ ಫ್ಯಾನ್ಸ್‌ ಕಿಡಿ!

ಟೆಸ್ಟ್‌ ಬಳಿಕ ಏಕದಿನದಲ್ಲೂ ನಾಯಕ ರೋಹಿತ್‌ ಶರ್ಮಾರ ಕಳಪೆ ಪ್ರದರ್ಶನ ಮುಂದುವರಿಯಿತು. ಅವರು ಕೇವಲ 2 ರನ್‌ ಗಳಿಸಿ ಪೆವಿಲಿಯನ್‌ ಮರಳಿದರು. ಯಶಸ್ವಿ ಜೈಸ್ವಾಲ್‌(15) ಕೂಡಾ ಮಿಂಚಲಿಲ್ಲ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?