Sunday, 19th May 2024

ಕ್ರೀಡಾಪಟುಗಳಿಗೆ ಶೌಚಾಲಯದಲ್ಲೇ ಊಟದ ವ್ಯವಸ್ಥೆ: ಕ್ರೀಡಾ ಅಧಿಕಾರಿ ಅಮಾನತು

ಲಖನೌ: ಕಬಡ್ಡಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಂದಿದ್ದ ಕ್ರೀಡಾಪಟು ಗಳಿಗೆ ಶೌಚಾಲಯದಲ್ಲೇ ಊಟದ ವ್ಯವಸ್ಥೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಕ್ರೀಡಾ ಅಧಿಕಾರಿಯೊಬ್ಬರನ್ನು ಯೋಗಿ ಸರ್ಕಾರ ಅಮಾನತು ಗೊಳಿಸಿದೆ.

ಉತ್ತರಪ್ರದೇಶದ ಶಹರಾನ್‍ಪುರ್‍ನಲ್ಲಿ ಹಮ್ಮಿಕೊಂಡಿದ್ದ ಅಂಡರ್ 17 ಬಾಲಕಿಯ ಕ್ರೀಡಾಕೂಟದ ವೇಳೆ ಶೌಚಾಲಯದಲ್ಲೇ ಅಡುಗೆ ಮಾಡಿ ಬಡಿಸಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ವಿಡಿಯೋ ವೀಕ್ಷಿಸಿದ ಕ್ರೀಡಾ ಸಚಿವರು ಹಾಗೂ ಅಧಿಕಾರಿಗಳು ಶೌಚಾಲಯದಲ್ಲೇ ಕಬಡ್ಡಿ ಆಟಗಾರ್ತಿ ಯರಿಗೆ ಊಟದ ವ್ಯವಸ್ಥೆ ಮಾಡಿರುವುದು ದುರದೃಷ್ಟದ ಸಂಗತಿಯಾಗಿ ರುವುದರಿಂದ ಸ್ಥಳೀಯ ಕ್ರೀಡಾ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಶಹರಾನ್‍ಪುರದ ಜಿಲ್ಲಾಧಿಕಾರಿ ಅಖಿಲೇಶ್ ಸಿಂಗ್ ಮಾತನಾಡಿ, ಕಬಡ್ಡಿ ಆಟಗಾರರಿಗೆ ಶೌಚಾಲಯದಲ್ಲಿ ಊಟದ ವ್ಯವಸ್ಥೆ ಮಾಡಿ ರುವ ಸುದ್ದಿಯು ತಡವಾಗಿ ತಿಳಿದಿದ್ದು, ಜಿಲ್ಲಾ ಕ್ರೀಡಾ ಅಧಿಕಾರಿ ಅನಿಮೇಶ್ ಸಕ್ಸೇನಾರ ಅವರನ್ನು ಕರ್ತವ್ಯ ಲೋಪದ ಆಧಾರದ ಮೇಲೆ ಸಸ್ಪೆಂಡ್ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2-3 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇವೆ ಎಂದು ತಿಳಿಸಿದರು.

ಭಾರೀ ಮಳೆ ಬೀಳುತ್ತಿದ್ದರಿಂದ ಹಾಗೂ ಕ್ರೀಡಾಂಗಣದ ನಿರ್ಮಾಣ ಕಾರ್ಯ ನಡೆಯುತ್ತಿದ್ದರಿಂದ ಈಜುಕೊಳಕ್ಕೆ ಹೊಂದಿ ಕೊಂಡಂತಿರುವ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ಆಹಾರ ಪದಾರ್ಥಗಳನ್ನು ಇರಿಸಲಾಗಿದ್ದರಿಂದ ಶೌಚಾಲಯದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.

error: Content is protected !!