ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಂತಿಮ ಏಕದಿನ ಪಂದ್ಯಕೂ ಮುನ್ನ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ವೇಗಿ ಹರ್ಷಿತ್‌ ರಾಣಾ ಸೇರ್ಪಡೆ

Harshit Rana: ಗಾಯದ ಕಾರಣದಿಂದಾಗಿ ರಾಣಾ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಐಪಿಎಲ್ ಸೀಸನ್ ಅನ್ನು ಸಹ ತಪ್ಪಿಸಿಕೊಂಡಿದ್ದರು. ದೀರ್ಘ ಕಾಲದ ವಿರಾಮದ ನಂತರ ತಂಡಕ್ಕೆ ಮರಳಿರುವ ಹರ್ಷಿತ್ ರಾಣಾ ತಮ್ಮ ಪುನರಾಗಮನದ ಪಂದ್ಯದಲ್ಲಿ ಹೇಗೆ ಆಡಬಹುದು ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ.

ಮೂರನೇ ಏಕದಿನಕ್ಕೆ ಭಾರತ ತಂಡ ಸೇರಿದ  ವೇಗಿ ಹರ್ಷಿತ್‌ ರಾಣಾ

Harshit Rana -

Abhilash BC
Abhilash BC Jun 19, 2026 10:03 AM

ನವದೆಹಲಿ, ಜೂ.19: ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಬಿಸಿಸಿಐ ಭಾರತ ತಂಡದಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಿದೆ. ವೇಗಿ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಹರ್ಷಿತ್ ರಾಣಾ ಬಿಸಿಸಿಐ ಸಿಒಇ (ಸೆಂಟರ್ ಆಫ್ ಎಕ್ಸಲೆನ್ಸ್) ನಲ್ಲಿ ತಮ್ಮ ಪುನರ್ವಸತಿಯನ್ನು ಪೂರ್ಣಗೊಳಿಸಿದ್ದು, ಮುಂಬರುವ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆ ಹೊಂದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

2026ರ ಟಿ20 ವಿಶ್ವಕಪ್ ಪೂರ್ವಸಿದ್ಧತಾ ಹಂತದಲ್ಲಿ ಹರ್ಷಿತ್ ರಾಣಾ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡ ನಂತರ ಅವರು ಪಂದ್ಯಾವಳಿಯಿಂದ ಹೊರಗುಳಿದಿದ್ದರು ಮತ್ತು ಅಂದಿನಿಂದ ಅವರು ಆಯ್ಕೆಯಿಂದ ಹೊರಗುಳಿದಿದ್ದರು.

ಗಾಯದ ಕಾರಣದಿಂದಾಗಿ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ಪರ ಐಪಿಎಲ್ ಸೀಸನ್ ಅನ್ನು ಸಹ ತಪ್ಪಿಸಿಕೊಂಡಿದ್ದರು. ದೀರ್ಘ ಕಾಲದ ವಿರಾಮದ ನಂತರ ತಂಡಕ್ಕೆ ಮರಳಿರುವ ಹರ್ಷಿತ್ ರಾಣಾ ತಮ್ಮ ಪುನರಾಗಮನದ ಪಂದ್ಯದಲ್ಲಿ ಹೇಗೆ ಆಡಬಹುದು ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ.

ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಶ್ರೇಯಾಂಕಾ; ಪ್ರೇಮಾ ರಾವತ್ ಬದಲಿ ಆಟಗಾರ್ತಿ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಸರಣಿಯ ಬಗ್ಗೆ ಹೇಳುವುದಾದರೆ, ಭಾರತೀಯ ತಂಡವು ಈಗಲಾಗಲೇ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಭಾರತ ಅಸಾಧಾರಣ ಪ್ರದರ್ಶನ ನೀಡಿದೆ ಮತ್ತು ಅಂತಿಮ ODI ನಲ್ಲಿ ಮತ್ತೊಂದು ಉತ್ತಮ ಪ್ರದರ್ಶನ ನೀಡುವ ಭರವಸೆಯಲ್ಲಿದೆ.

ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಜೂನ್ 20 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಮೆನ್ ಇನ್ ಬ್ಲೂ ತಂಡ ಅಫ್ಘಾನಿಸ್ತಾನವನ್ನು ಕ್ಲೀನ್ ಸ್ವೀಪ್ ಮಾಡಲು ಪ್ರಯತ್ನಿಸುತ್ತಿದ್ದರೆ, ಪ್ರವಾಸಿ ತಂಡ ಸಮಾಧಾನಕರ ಗೆಲುವಿನ ನಿರೀಕ್ಷೆಯಲ್ಲಿದೆ.

ಮೂರನೇ ಏಕದಿನಕ್ಕೆ ಭಾರತ ಪರಿಷ್ಕೃತ ತಂಡ

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ, ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ.