Thursday, 19th September 2024

ಬೆಳ್ಳಿ ಪದಕ ವಿಜೇತ ಸುಹಾಸ್ ಯತಿರಾಜ್’ರಿಗೆ ಪ್ರಧಾನಿ ಮೋದಿ ಅಭಿನಂದನೆ

ಟೊಕಿಯೋ: ಪ್ಯಾರಾಲಂಪಿಕ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಕನ್ನಡಿಗ ಶಿವಮೊಗ್ಗದ ಸುಹಾಸ್ ಯತಿರಾಜ್’ರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜಿಲ್ಲಾಧಿಕಾರಿಯಾಗಿ ಸುಹಾಸ್ ಕಾರ್ಯ ನಿರ್ವಹಿಸು ತ್ತಿದ್ದಾರೆ. ಟೊಕಿಯೋ ಒಲಂಪಿಕ್ಸ್ ನಲ್ಲಿ ಸುಹಾಸ್ ಬ್ಯಾಡ್ಮಿಂಟನ್ ಸ್ಪರ್ಧೆಯ ಎಸ್‌ಎಲ್4 ಫೈನಲ್ ಪಂದ್ಯದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ನೀವು ಕರ್ನಾಟಕ ಮತ್ತು ದೇಶಕ್ಕೆ ಗೌರವ ತಂದು ಕೊಟ್ಟಿದ್ದೀರಿ. ಸೇವೆ ಮತ್ತು ಕ್ರೀಡೆಯ ಅದ್ಭುತ ಸಂಗಮ ನೀವು. ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಯ ಪದಕ ಗೆದ್ದ ನಿಮಗೆ ಅಭಿನಂದನೆಗಳು.

ಮುಂದಿನ ಪ್ರಯತ್ನಗಳಿಗೆ ಶುಭವಾಗಲಿ ಎಂದು ಮೋದಿ ಹಾರೈಸಿದ್ದಾರೆ. ಇದಕ್ಕೆ ಸುಹಾಸ್ ಅವರು ಪ್ರಧಾನಿಯವರಿಗೆ ಧನ್ಯವಾದ ಹೇಳಿ ಅವರೊಂದಿಗೆ ಮಾತನಾಡಿದ್ದಾರೆ.

Leave a Reply

Your email address will not be published. Required fields are marked *