ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮುಂಬೈ ಇಂಡಿಯನ್ಸ್‌ ತೊರೆಯಲು ಮುಂದಾದ ಸೂರ್ಯಕುಮಾರ್‌ ಯಾದವ್‌!

Suryakumar Yadav: ಭಾರತದ ಟಿ20ಐ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ಸೇರಿಸಿಕೊಳ್ಳುವ ನಿರ್ಧಾರ ಪ್ರಕಟವಾದಾಗಿನಿಂದ ಸೂರ್ಯಕುಮಾರ್‌ ಯಾದವ್‌ ಅವರ ಮುಂದಿನ ಕ್ರಿಕೆಟ್‌ ವೃತ್ತಿ ಬದುಕಿನ ಬಗ್ಗೆ ಹಲವು ಊಹಾಪೋಹಗಳು ಹರಿದಾಡಲಾರಂಭಿಸಿದೆ.

Suryakumar Yadav

ಮುಂಬಯಿ, ಜೂ.8: ಟೀಮ್‌ ಇಂಡಿಯಾದ ಟಿ20 ನಾಯಕತ್ವ ಕಳೆದುಕೊಂಡಿರುವ ಸೂರ್ಯಕುಮಾರ್‌ ಯಾದವ್‌(Suryakumar Yadav) ಅವರು ಇದೀಗ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ ಬೇರ್ಪಡಲಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿವೆ. ಇದಕ್ಕೆ ಪುಷ್ಠಿ ಎಂಬಂತೆ ಸೂರ್ಯಕುಮಾರ್‌ ಅವರ ಇನ್‌ಸ್ಟಾಗ್ರಾಮ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಎಲ್ಲ ಪೋಸ್ಟ್‌ಗಳು ಮಾಯವಾಗಿರುವುದು.

ನೆಟ್ಟಿಗರು ಸೂರ್ಯಕುಮಾರ್ ಇನ್‌ಸ್ಟಾಗ್ರಾಮ್‌ನಲ್ಲಿ ಅನುಸರಿಸುತ್ತಿರುವ ಖಾತೆಗಳಲ್ಲಿ ಹುಡುಕಾಟ ನಡೆಸಿದಾಗ, ಮುಂಬೈ ಇಂಡಿಯನ್ಸ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಖಾತೆಗಳು ಕಂಡುಬಂದಿಲ್ಲ. ಸೂರ್ಯಕುಮಾರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಂದಿದ್ದ ಮುಂಬೈ ತಂಡದ ಏಕೈಕ ಫೋಟೋವೆಂದರೆ ಭಾರತೀಯ ಕ್ರಿಕೆಟ್‌ನ ಇಬ್ಬರು ದೊಡ್ಡ ನಾಯಕರಾದ ರೋಹಿತ್ ಶರ್ಮಾ ಮತ್ತು ಎಂಎಸ್ ಧೋನಿ ಅವರೊಂದಿಗೆ ಕಾಣಿಸಿಕೊಂಡಿದ್ದ ಫೋಟೋ.

ಸೂರ್ಯಕುಮಾರ್ 2018 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಮುಂಬೈ ಇಂಡಿಯನ್ಸ್ ಸೇರಿದಾಗಿನಿಂದ ತಂಡದಲ್ಲಿದ್ದಾರೆ. ವರ್ಷಗಳಲ್ಲಿ, ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ತಂಡದ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದರು. ಆದರೆ 2026 ರ ಆವೃತ್ತಿಯಲ್ಲಿ ಅತ್ಯಂತ ಘೋರ ಬ್ಯಾಟಿಂಗ್‌ ವೈಫಲ್ಯ ಕಂಡರು.

2026 ರ ಐಪಿಎಲ್ ಅಭಿಯಾನದಲ್ಲಿ ಸೂರ್ಯಕುಮಾರ್ ಮುಂಬೈ ಪರ 20.77 ರ ಸರಾಸರಿಯಲ್ಲಿ ಕೇವಲ 270 ರನ್ ಗಳಿಸಿದರು. ಅವರು ಕೇವಲ ಎರಡು ಅರ್ಧಶತಕಗಳನ್ನು ಮಾತ್ರ ಗಳಿಸಿದರು. ತಂಡ ಪಾಯಿಂಟ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನ ಗಳಿಸಿತ್ತು.

ಚೊಚ್ಚಲ ಪಂದ್ಯದಲ್ಲೇ 6 ವಿಕೆಟ್‌ ಕಿತ್ತು ಹಲವು ದಾಖಲೆ ಬರೆದ ಸ್ಪಿನ್ನರ್ ಮಾನವ್ ಸುತಾರ್

ಸೂರ್ಯಕುಮಾರ್ ಯಾದವ್ ತಮ್ಮ ಬಯೋದಿಂದ ಮುಂಬೈ ಇಂಡಿಯನ್ಸ್ ಅನ್ನು ತೆಗೆದುಹಾಕಿದ್ದಾರೆ. ಜತೆಗೆ ಮುಂಬೈ ಇಂಡಿಯನ್ಸ್ ಅನ್ನು ಅನ್‌ಫಾಲೋ ಮಾಡಿದ್ದಾರೆ. ಎಂಐ ಅವರನ್ನು ಅನ್‌ಫಾಲೋ ಮಾಡಿದ್ದಾರೆ. ಅವರು ತಮ್ಮ ಇನ್‌ಸ್ಟಾ ಐಡಿಯಿಂದ ಎಂಐಗೆ ಸಂಬಂಧಿಸಿದ ಎಲ್ಲಾ ಚಿತ್ರಗಳು ಮತ್ತು ವೀಡಿಯೊಗಳನ್ನು ಅಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್‌ಗೆ ವಿದಾಯ ಹೇಳಬಹುದು ಎಂಬ ಊಹಾಪೋಹಗಳು ಹುಟ್ಟಿಕೊಂಡಿವೆ.

ಭಾರತದ ಟಿ20ಐ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ಸೇರಿಸಿಕೊಳ್ಳುವ ನಿರ್ಧಾರ ಪ್ರಕಟವಾದಾಗಿನಿಂದ ಸೂರ್ಯ ಅವರ ಮುಂದಿನ ಕ್ರಿಕೆಟ್‌ ವೃತ್ತಿ ಬದುಕಿನ ಬಗ್ಗೆ ಹಲವು ಊಹಾಪೋಹಗಳು ಹರಿದಾಡಲಾರಂಭಿಸಿದೆ.

ಸೂರ್ಯ ಅವರನ್ನು ನಾಯಕತ್ವದಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಎಂಎಸ್‌ಕೆ ಪ್ರಸಾದ್, ಸೂರ್ಯಕುಮಾರ್ ಯಾದವ್ ಅವರನ್ನು ಕೈಬಿಡಲಾಗಿಲ್ಲ, ಬದಲಿಗೆ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಿದ್ದಾರೆ. ನೀವು ವಿಶ್ವಕಪ್ ಗೆದ್ದ ನಾಯಕನನ್ನು, ವಿಶೇಷವಾಗಿ ಮುಂದಿನ ಅಂತಾರಾಷ್ಟ್ರೀಯ ಪ್ರವಾಸದಲ್ಲಿ, ಪ್ರಶಸ್ತಿ ಗೆದ್ದ ನಾಯಕನನ್ನು ಇದ್ದಕ್ಕಿದ್ದಂತೆ ಕೈಬಿಡಲು ಸಾಧ್ಯವಿಲ್ಲ. ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಿದಂತೆ, ಸೂರ್ಯ ಅವರಿಗೂ ವಿಶ್ರಾಂತಿ ನೀಡಲಾಗಿದೆ. ಅವರು ಅತ್ಯುತ್ತಮ ಆಟಗಾರರಾಗಿದ್ದು, ಅವರನ್ನು ತಂಡದಿಂದ ಕೈಬಿಡುವುದನ್ನು ಯೋಚಿಸಲೂ ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.