ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಐಪಿಎಲ್ 2026ರ ಫೈನಲ್‌ಗೆರಲು ವಿಫಲವಾದ ಬೇಸರದಲ್ಲಿ ಕಣ್ಣೀರು ಹಾಕಿದ ವೈಭವ್ ಸೂರ್ಯವಂಶಿ

Sooryavanshi breaks down: ನಿರಾಸೆಗೊಂಡ ಸೂರ್ಯವಂಶಿಯನ್ನು ರಾಜಸ್ಥಾನ್ ರಾಯಲ್ಸ್ ತಂಡದ ಹಲವಾರು ತಂಡದ ಸದಸ್ಯರು ಸಮಾಧಾನಪಡಿಸಲು ಪ್ರಯತ್ನಿಸುತ್ತಿರುವುದು ಟೆಲಿವಿಷನ್ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸೂರ್ಯವಂಶಿ ಬಳಿಗೆ ನಡೆದವರಲ್ಲಿ ರವೀಂದ್ರ ಜಡೇಜಾ ಕೂಡ ಇದ್ದರು, ತಂಡದ ವ್ಯವಸ್ಥಾಪಕಿ ರೋಮಿ ಭಿಂದರ್ ಸೇರಿದಂತೆ ಸಹಾಯಕ ಸಿಬ್ಬಂದಿ ಸದಸ್ಯರು ಸಹ ಅವರನ್ನು ಸಮಾಧಾನಪಡಿಸುತ್ತಿರುವುದು ಕಂಡುಬಂದಿತು.

Sooryavanshi

ಮುಲ್ಲನ್‌ಪುರ, ಮೇ 30: ಶುಕ್ರವಾರ ರಾತ್ರಿ ನಡೆದಿದ್ದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಹೃದಯವಿದ್ರಾವಕ ಸೋಲಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡದ ಅಭಿಯಾನ ಕೊನೆಗೊಂಡತು. ತಂಡ ಸೋಲುತ್ತಿದ್ದಂತೆ ವೈಭವ್ ಸೂರ್ಯವಂಶಿ ತಮ್ಮ ಭಾವನೆಗಳನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಆರ್‌ಆರ್ ಡಗೌಟ್‌ನಲ್ಲಿ ಕುಳಿತಿದ್ದ ಅವರು ಕಣ್ಣೀರು ಹಾಕಿದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು. ನೋಡುಗರು ಕೂಡ ಭಾವುಕರಾಗುವಂತೆ ಮಾಡಿದೆ.

ಸೋಲಿನ ನಿರಾಶೆ ಆವರಿಸಿದಾಗ ಸೂರ್ಯವಂಶಿ ಆರಂಭದಲ್ಲಿ ತನ್ನ ಭಾವನೆಗಳನ್ನು ತನ್ನ ಕ್ಯಾಪ್‌ನಿಂದ ಮರೆಮಾಡಲು ಪ್ರಯತ್ನಿಸಿದರು, ನಂತರ ಟವಲ್‌ನಿಂದ ಮುಖ ಮುಚ್ಚಿಕೊಂಡರು. ಗಮನಾರ್ಹವಾಗಿ, ಒತ್ತಡದ ಪಂದ್ಯದಲ್ಲಿ ಅಮೋಘ ಇನ್ನಿಂಗ್ಸ್ ಪ್ರದರ್ಶಿಸಿದರು. ಆದರೆ ತಂಡ ಗೆಲುವು ಕಾಣದ್ದ ಅವರಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ಇಬ್ಬರಿಗೂ ದುಃಖ ತರಿಸಿತು.

ನಿರಾಸೆಗೊಂಡ ಸೂರ್ಯವಂಶಿಯನ್ನು ರಾಜಸ್ಥಾನ್ ರಾಯಲ್ಸ್ ತಂಡದ ಹಲವಾರು ತಂಡದ ಸದಸ್ಯರು ಸಮಾಧಾನಪಡಿಸಲು ಪ್ರಯತ್ನಿಸುತ್ತಿರುವುದು ಟೆಲಿವಿಷನ್ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸೂರ್ಯವಂಶಿ ಬಳಿಗೆ ನಡೆದವರಲ್ಲಿ ರವೀಂದ್ರ ಜಡೇಜಾ ಕೂಡ ಇದ್ದರು, ತಂಡದ ವ್ಯವಸ್ಥಾಪಕಿ ರೋಮಿ ಭಿಂದರ್ ಸೇರಿದಂತೆ ಸಹಾಯಕ ಸಿಬ್ಬಂದಿ ಸದಸ್ಯರು ಸಹ ಅವರನ್ನು ಸಮಾಧಾನಪಡಿಸುತ್ತಿರುವುದು ಕಂಡುಬಂದಿತು. ಒಂದು ಹಂತದಲ್ಲಿ, ಸೂರ್ಯವಂಶಿ ಕಣ್ಣೀರನ್ನು ತಡೆದುಕೊಳ್ಳಲು ಹೋರಾಡುತ್ತಾ ಟವಲ್‌ನಿಂದ ಕ್ಯಾಮೆರಾಗಳಿಂದ ತನ್ನನ್ನು ತಾನು ರಕ್ಷಿಸಿಕೊಂಡಂತೆ ಕಂಡುಬಂದಿತು.

IPL 2026: ಯಾರಿಂದಲೂ ಸಾಧ್ಯವಾಗದ ಮತ್ತೊಂದು ದೊಡ್ಡ ದಾಖಲೆ ಬರೆದ ವೈಭವ್‌ ಸೂರ್ಯವಂಶಿ!

ರಾಜಸ್ಥಾನ ರಾಯಲ್ಸ್ ಪರ ನಾಕೌಟ್ ಪಂದ್ಯದಲ್ಲಿ ಯುವ ಆಟಗಾರ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡಿದ ಸ್ವಲ್ಪ ಸಮಯದ ನಂತರ ಭಾವನಾತ್ಮಕ ದೃಶ್ಯಗಳು ಹೊರಬಿದ್ದವು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್‌ಗೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಕೇವಲ 9 ರನ್ ಗಳಿಸುವಷ್ಟರಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ಧ್ರುವ್ ಜುರೇಲ್ ವಿಕೆಟ್ ಕಳೆದುಕೊಂಡು ತಂಡ ಶೋಚನೀಯ ಸ್ಥಿತಿಯಲ್ಲಿತ್ತು. ಈ ಹಂತದಲ್ಲಿ ಕ್ರೀಸ್‌ಗಿಳಿದ ವೈಭವ್ ಸೂರ್ಯವಂಶಿ ಪಂದ್ಯದ ಚಿತ್ರಣವನ್ನೇ ಬದಲಿಸಿದರು. ಸಿಕ್ಸರ್, ಬೌಂಡರಿಗಳ ಸುರಿಮಳೆಗೈದ ಅವರು 96 ರನ್‌ ಬಾರಿಸಿದರು. ಕೇವಲ 4 ರನ್‌ಗಳಿಂದ ಸತತ ಎರಡನೇ ಶತಕ ಮಿಸ್ ಮಾಡಿಕೊಂಡರು.

215 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ನಾಯಕ ಶುಭಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಮೊದಲ ವಿಕೆಟ್‌ಗೆ ಸ್ಫೋಟಕ ಬ್ಯಾಟಿಂಗ್ ನಡೆಸಿ ಅಡಿಪಾಯ ಹಾಕಿಕೊಟ್ಟರು. ನಾಯಕನ ಆಟವಾಡಿದ ಶುಭಮನ್ ಗಿಲ್ ಕೇವಲ 53 ಎಸೆತಗಳಲ್ಲಿ ಬರೋಬ್ಬರಿ 15 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 104 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.