RCB victory parade stampede: ಹೃದಯ ಒಡೆದಿದೆ; ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ
ಕ್ರೀಡಾಂಗಣದ ವಿವಿಧ ದ್ವಾರಗಳ ಬಳಿಯೇ ಉಚಿತ ಟಿಕೆಟ್ ನೀಡಲಾಗುವುದು ಎಂದು ಆರ್ಸಿಬಿ ತನ್ನ ವೆಬ್ಸೈಟ್ನಲ್ಲಿ ಬುಧವಾರ ಮಧ್ಯಾಹ್ನ ಮಾಹಿತಿ ನೀಡಿತ್ತು. ಅದಕ್ಕೂ ಮೊದಲು ವಿಧಾನಸೌಧ ಮೆಟ್ಟಿಲುಗಳ ಮೇಲೆ ಆರ್ಸಿಬಿ ಆಟಗಾರರನ್ನು ಸನ್ಮಾನಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಬಹುದು ಎಂದು ಭಾವಿಸಿ ಎರಡೂ ಸ್ಥಳಗಳಲ್ಲೂ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಗೊಂದಲದ ಮಾಹಿತಿಯೇ ಅಭಿಮಾನಿಗಳ ನೂಕುನುಗ್ಗಲಿಗೆ ಕಾರಣವಾಯಿತು.


ಬೆಂಗಳೂರು: ಹದಿನೆಂಟು ವರ್ಷದ ಬಳಿಕ ಐಪಿಎಲ್(IPL 2025) ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಾಗರೋಪಾದಿಯಲ್ಲಿ ಜನ ಹರಿದುಬಂದು ಆ ವೇಳೆ ಉಂಟಾದ ಕಾಲ್ತುಳಿತದಿಂದ 11 ಮಂದಿ ದುರಂತ(RCB victory parade stampede) ಸಾವು ಕಂಡರು. ಈ ದುರಂತಕ್ಕೆ ಆರ್ಸಿಬಿಯ ಆಟಗಾರ ವಿರಾಟ್ ಕೊಹ್ಲಿ( virat kohli) ಸಂತಾಪ ಸೂಚಿಸಿದ್ದು, ‘ಮಾತೇ ಹೊರಡದಂತಾಗಿದೆ.. ಹೃದಯ ಒಡೆದಿದೆ..’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ವಿರಾಟ್, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಸಾವು-ನೋವಿನಿಂದ ತೀವ್ರ ದುಃಖಿತನಾಗಿದ್ದೇನೆ. ಮಾತುಗಳೇ ಹೊರಡುತ್ತಿಲ್ಲಎಂದು ಕೊಹ್ಲಿ ಬರೆದುಕೊಂಡಿದ್ದಾರೆ.
ಕ್ರೀಡಾಂಗಣದ ವಿವಿಧ ದ್ವಾರಗಳ ಬಳಿಯೇ ಉಚಿತ ಟಿಕೆಟ್ ನೀಡಲಾಗುವುದು ಎಂದು ಆರ್ಸಿಬಿ ತನ್ನ ವೆಬ್ಸೈಟ್ನಲ್ಲಿ ಬುಧವಾರ ಮಧ್ಯಾಹ್ನ ಮಾಹಿತಿ ನೀಡಿತ್ತು. ಅದಕ್ಕೂ ಮೊದಲು ವಿಧಾನಸೌಧ ಮೆಟ್ಟಿಲುಗಳ ಮೇಲೆ ಆರ್ಸಿಬಿ ಆಟಗಾರರನ್ನು ಸನ್ಮಾನಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಬಹುದು ಎಂದು ಭಾವಿಸಿ ಎರಡೂ ಸ್ಥಳಗಳಲ್ಲೂ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಗೊಂದಲದ ಮಾಹಿತಿಯೇ ಅಭಿಮಾನಿಗಳ ನೂಕುನುಗ್ಗಲಿಗೆ ಕಾರಣವಾಯಿತು.
ಇದನ್ನೂ ಓದಿ IPL 2025: ʻನಾವು ತೀವ್ರ ದುಖಃದಲ್ಲಿದ್ದೇವೆʼ-ಕಾಲ್ತುಳಿತದ ಪ್ರಕರಣದ ಬಗ್ಗೆ ಆರ್ಸಿಬಿ ಪ್ರತಿಕ್ರಿಯೆ!
ಈ ಘಟನೆಯ ಕುರಿತು ಆರ್ಸಿಬಿ ಪ್ರತಿಕ್ರಿಯೆ ನೀಡಿದ್ದು, ಆರ್ಸಿಬಿ ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕ ಸಭೆಗಳ ಕುರಿತು ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ. ದುರಂತದಲ್ಲಾದ ಜೀವಹಾನಿಗೆ ಆರ್ಸಿಬಿ ಶೋಕ ವ್ಯಕ್ತಪಡಿಸುತ್ತದೆ. ಸಂತ್ರಸ್ತ ಕುಟುಂಬಗಳಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತದೆʼ ಎಂದು ಹೇಳಿದೆ.