Saturday, 26th October 2024

ಕೃಷಿ ವಿವಿ ಸಿಬ್ಬಂದಿಗೆ ರಜೆ ಘೋಷಣೆ: ಬಿ.ಸಿ.ಪಾಟೀಲ್

ಬೆಂಗಳೂರು:

ರಾಜ್ಯದ ಬೆಂಗಳೂರು, ಧಾರವಾಡ, ರಾಯಚೂರು ಹಾಗೂ ಶಿವಮೊಗ್ಗದ ಕೃಷಿ ವಿಶ್ವವಿದ್ಯಾಾಲಯಗಳಲ್ಲಿನ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಮತ್ತು ಗುತ್ತಿಗೆ ಆಧಾರಿತ ಸಿಬ್ಬಂದಿಗಳಿಗೆ ಮಾ.23 ರಿಂದ ಮಾ.31ರವರೆಗೆ ರಜೆ ನೀಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಇಲಾಖೆಯು ಮಾ 21ರಂದು ಹೊರಡಿಸಿರುವ ಪತ್ರದನ್ವಯ ಕರೋನಾ ವೈರಸ್ ಸೋಂಕು ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವೇತನ ಸಹಿತ ರಜೆ ನೀಡಲು ಸಚಿವರು ಸೂಚಿಸಿದ್ದಾರೆ.

ಮಾ.14 ರಿಂದ 31ರವರೆಗೆ ವಿದ್ಯಾಾರ್ಥಿಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ರಜಾ ಸಮಯದಲ್ಲಿ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಶೋಧನೆಗೆ ಸಂಬಂಧಿಸಿದ ಸಂಶೋಧನಾ ಅಧ್ಯಯನ ಪಠ್ಯಕ್ರಮವನ್ನು ಆನ್‌ಲೈನ್ ಮೂಲಕ ಅಭಿವೃದ್ಧಿಪಡಿಸುವಂತೆ ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಪ್ರಶ್ನೆ ಬ್ಯಾಾಂಕ್ ತಯಾರಿಸಲು ಮತ್ತು ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ತಂಗಲು ಸುರಕ್ಷಿತ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ.