Sunday, 28th April 2024

ಸರ್ಕಾರಗಳ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ: ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ ಎನ್.

ಕೊಪ್ಪಳ:

ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳನ್ನು ಸಾರ್ವಜನಿಕರು ಹಾಗೂ ಅಧಿಕಾರಿಗಳು ತಪ್ಪದೇ ಪಾಲಿಸಬೇಕು ಎಂದು ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ ಎನ್. ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಸ್ಥಿತಿ-ಗತಿ ಕುರಿತು ಅಧಿಕಾರಿಗಳೊಂದಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೋವಿಡ್-19 ಪ್ರಕರಣಗಳು ದಾಖಲಾಗದಂತೆ ಅಧಿಕಾರಿಗಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಶ್ಲಾಘನೀಯ ವ್ಯಕ್ತಪಡಿಸಿದ ಕಾರ್ಯದರ್ಶಿಗಳು, ಆದ್ಯಾಗೂ ಅಧಿಕಾರಿಗಳು ಕೋವಿಡ್ ಪ್ರಕರಣಕ್ಕೆ ಸಂಬAಧಿಸಿದAತೆ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷಷ್ಯ ತೋರುವಂತಿಲ್ಲ ಎಂದು ಸೂಚನೆ ನೀಡಿದರು.

ಈಗಾಗಲೇ ಕೇಂದ್ರ ಸರಕಾರವು ಕೃಷಿ ಚಟುವಟಿಕೆ, ಅಗತ್ಯ ವಸ್ತುಗಳು ಮತ್ತು ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಒದಗಿಸುವುದರ ಜೊತೆಗೆ ಇತರ ನಿಯಮಗಳನ್ನು ಸಡಿಲಗೊಳಿಸಿದೆ. ಅವರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಬೀಜ, ಗೊಬ್ಬರ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಕೃಷಿ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಜನರಿಗೆ ಯಾವುದೇ ರೀತಿಯ ದಿನಸಿ ಅಗತ್ಯ ವಸ್ತುಗಳಾದ ತರಕಾರಿ, ಅಕ್ಕಿ, ಬೆಳೆ ಸೇರಿದಂತೆ ಇತರೆ ವಸ್ತುಗಳನ್ನು ಕೊಂಡುಕೊಳ್ಳಲು ತೊಂದರೆಯಾಗದAತೆ ನೋಡಿಕೊಳ್ಳಬೇಕು ಹಾಗೂ ಯಾವುದೇ ಸಮಸ್ಯೆ ಮತ್ತು ಸಲಹೆಗಳಿದ್ದರೆ ತಮ್ಮ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿನೆ ನೀಡಿದರು.

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮಾತನಾಡಿ, ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಎಲ್‌ಒಗಳನ್ನು ಬಳಸಿಕೊಂಡು ಈಗಾಗಲೇ ಶೇ.50 ರಷ್ಟು ಸರ್ವೇ ಮಾಡಲಾಗಿದ್ದು, ಪ್ರತಿ ಎರಡು ದಿನಗಳಿಗೊಮ್ಮೆ ಇವರು ಮನೆ-ಮನೆಗೆ ಹೋಗಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈಗಾಗಲೇ ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್-19 ವಿಶೇಷ ಚಿಕಿತ್ಸಾ ಆಸ್ಪತ್ರೆಯನ್ನಾಗಿ ಮಾಡಿದ್ದು, ಇದರ ನೆಲ ಮಹಡಿಯಲ್ಲಿ 50 ಬೆಡ್‌ಗಳನ್ನೊಳಗೊಂಡ ಐಸಿಯು ಕೇಂದ್ರವನ್ನು ಸ್ಥಾಪಿಸಲಾಗಿದೆ. ಅಲ್ಲದೇ ಗಂಗಾವತಿಯಲ್ಲಿಯೂ 30 ಬೆಡ್‌ಗಳ ಐಸಿಯು ಕೇಂದ್ರ ಪ್ರಾರಂಭಿಸಲಾಗಿದೆ. ಕಿಮ್ಸ್ನಲ್ಲಿ ಪರ್ನಮೆಂಟ್ ಲ್ಯಾಬ್‌ಗಾಗಿ ಈಗಾಗಲೇ ವರ್ಕ್ ಆಡರ್ ನೀಡಲಾಗಿದೆ. ಕೊಪ್ಪಳ ಜಿಲ್ಲೆಯ ಜನರು ರಾಜ್ಯದ ವಿವಿಧ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಧಾರವಾಡ ಮತ್ತು ಬೆಂಗಳೂರುಗಳಲ್ಲಿ ಸಿಲಿಕಿಕೊಂಡಿದ್ದು, ಅವರನ್ನು ಕರೆತರಲು ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲಿದ್ದು, ಅವರಿಗೆ ಒಂದೊಂದು ವಾಹನದ ವ್ಯವಸ್ಥೆಯನ್ನು ಮಾಡಲು ಕೋರಲಾಗಿದೆ. ಇದರ ಜವಾಬ್ದಾರಿಯನ್ನು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಿದ್ದು, ಬೇರೆ ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಜನರು ನಮ್ಮ ಜಿಲ್ಲೆಗೆ ಬಂದ ತಕ್ಷಣ ಅವರಿಗೆ ಪ್ರತ್ಯೇಕ ಕ್ವಾರೆಂಟೈನ್‌ನಲ್ಲಿ ಇಡಲಾಗುವುದು ಮತ್ತು ಪ್ರತಿ ಗ್ರಾ.ಪಂ.ಗಳಿಗೆ ಎರಡು ಥರ್ಮಲ್ ಸ್ಕಾನರ್‌ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಸಭೆಯಲ್ಲಿ ಜಿಪಂ ಸಿಇಒ ರಘುನಂದನಮೂರ್ತಿ, ಎಸ್ಪಿ ಜಿ.ಸಂಗೀತಾ, ಎಡಿಸಿ ಎಂ.ಪಿ. ಮಾರುತಿ, ಡಿಎಚ್ ಒ ಡಾ.ಲಿಂಗರಾಜು, ಆಹಾರ ಇಲಾಖೆ ಉಪನಿರ್ದೇಶಕ ನಾರಾಯಣರೆಡ್ಡಿ, ಕೊಪ್ಪಳ ತಹಶೀಲ್ದಾರ ಜೆ.ಬಿ ಮಜ್ಜಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!