Monday, 16th September 2024

ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

ರಾಜ್ಯ ಸರ್ಕಾರದ 2021-22 ಸಾಲಿನ ಬಜೆಟ್ ನಲ್ಲಿ ಅಂಗನವಾಡಿ ನೌಕರರ ಕಡೆಗಣನೆ

ಪಾವಗಢ: ಪಟ್ಟಣದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಕಚೇರಿಯ ಮುಂದೆ ಅಂಗನವಾಡಿ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಇದೇ ವೇಳೆ ಗುಲ್ಜಾರ್ ವೃತ್ತದ ನಾಯಕಿ ಮಾತನಾಡಿ 2021-22 ರ ಬಜೆಟ್ ನಲ್ಲಿ ಅಂಗನವಾಡಿ ನೌಕರರ ಬೇಡಿಕೆಗಳನ್ನು
ಪರಿಶೀಲನೆ ಮಾಡಲು ಒತ್ತಾಯಿಸಿ ಕರೋನಾ ಸಂದರ್ಭದಲ್ಲಿ ಅಂಗನವಾಡಿ ನೌಕರರು ಕಡಿಮೆ ಸವಲತ್ತುಗಳಿಗೆ ದುಡಿಯು ತ್ತಿದ್ದರೂ ಕೂಡಾ ಈ ಸಂಧರ್ಭದಲ್ಲಿ ಸರ್ಕಾರ ಸೂಚನೆ ಕೊಟ್ಟ ಕೂಡಲೇ ಯಾವುದೇ ಶರತ್ತಗಳಿಲ್ಲದೆ ‘ಕರೋನಾ ನಿರ್ವಹಿಸಿ ದ್ದಾರೆ.

ಈ ಕೆಲಸ ಮಾಡುವಾಗ ಕೆಲಸದ ಒತ್ತಡದಿಂದ 35 ಜನ.ಹಾಗೂ ಕರೋನ ಕೆಲಸವನ್ನು ಮಾಡುವಾಗ 28 ಜನರು ತಮ್ಮ ಜೀವನ ಗಳನ್ನೇ ಮುಡುಪಾಗಿಟ್ಟು ಬಲಿಯಾಗಿದ್ದಾರೆ. 173 ಜನರಿಗೆ ಕರೋನಾ ಬಂದು ಆ ದಿನಗಳಲ್ಲಿ ತಮ್ಮ ಕುಟುಂಬದ ಆದಾಯವನ್ನು ಕಳೆದುಕೊಂಡಿದ್ದಾರೆ. ರಾಜ್ಯದ ಹೈಕೋರ್ಟ್ ಕರೋನಾ ಸಂಧರ್ಭದಲ್ಲಿ ಮಕ್ಕಳಿಗೆ ಮಹಿಳೆಯರ ಅಪೌಷ್ಠಿಕತೆ ತಡೆಯಲು ಪೌಷ್ಠಿಕ ಆಹಾರ ಫಲಾನುಭವಿಗಳಿಗೆ ತಲುಪಿಸುವುದನ್ನು ಖಾತ್ರಿ ಪಡಿಸಬೇಕೆಂದೂ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿತ್ತು. ಅಂತಹ ಎಲ್ಲಾ ದೂರುಗಳಿಂದ ಎಚ್ಚರಿಕೆಗಳಿಂದ ಸರ್ಕಾರದ ಘನತೆಯನ್ನು ಕಾಪಾಡಿದ್ದು ಇದೇ ಅಂಗನವಾಡಿ ನೌಕರರು.

ಕರೋನಾ ಸಾಂಕ್ರಾಮಿಕದ ಭಯಂಕರತೆ ಇದ್ದಾಗಲೂ ಮಲೆನಾಡು, ಗುಡ್ಡಗಾಡು, ಕೊಳಚೆ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಕುಟುಂಬದ ವಾಹನಗಳನ್ನು ಬಳಸಿ ಆಹಾರ ಸಾಮಾಗ್ರಿಗಳನ್ನು ಮನೆಮನೆಗೆ ಹಂಚಿದ್ದು, ಕ್ವಾರಂಟೈನ್ ಆದ ಸ್ಥಳಗಳಿಗೆ ಮಾಸ್ಕ್, ಸ್ಯಾನಿಟೈಜರ್, ಮಾತ್ರೆಗಳು ಇಲ್ಲದಿದ್ದರೂ ತಮ್ಮ ಕೈಯಿಂದ ಎಲ್ಲವನ್ನು ಖರ್ಚು ಮಾಡಿ ಕೊಂಡು ಆಹಾರ ವಿತರಣೆ ಮಾಡಿದ್ದಾರೆ.

ಕರೋನಾ ರೋಗಿಗಳನ್ನು ಸಂತೃಪ್ತಿಸಿದ್ದು ಮಾತ್ರವಲ್ಲದೇ ಸಾರ್ವಜನಿಕರಿಂದ ಹಲ್ಲೆಗೊಳಗಾದರೂ ಎದೆಗುಂದದೆ ಕೆಲಸ ಮಾಡಿದ ಈ ಹೆಣ್ಣು ಮಕ್ಕಳ ಸೈರ್ಯವನ್ನು ಮತ್ತು ಸೇವೆಯನ್ನು ಬರಿಯ ಮಾತುಗಳಲ್ಲಿ ಹೇಳಿದರೆ ಸಾಕೇ? ಹಲವು ಹಂತಗಳ ಹೋರಾಟಗಳ ಒತ್ತಾಯಗಳ ಭಾಗವಾಗಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೇವಾ ಜೇಷ್ಠತೆಯ ಆಧಾರದಲ್ಲಿ 153.25 ಕೋಟಿ 6.99 ಕೋಟಿ ಮಿನಿ ಅಂಗನವಾಡಿ ಕೇಂದ್ರಗಳ ಸಹಾಯಕಿ ನೇಮಕಾತಿ 131.42 ಕೋಟಿ ಅಂಗನ ವಾಡಿ ಸಹಾಯಕಿಯರಿಗೆ ಸಂಬಳದ ವ್ಯತ್ಯಾಸ ಮೊತ್ತ 47.82 ಕೋಟಿ ನಿವೃತಿಸೌಲಭ್ಯ 339.48 ಮೊತ್ತ ಶಿಫಾರಸ್ಸು ಮಾಡಲಾಗಿತ್ತು. ಈ ಮೊತ್ತ ನೀಡಿದ್ದಿರೆ, 1 ಲಕ್ಷ 30 ಸಾವಿರ ಕುಟುಂಬಗಳಿಗೆ ಸಹಾಯವಾಗುತ್ತಿತ್ತು.

ಆದರೆ ರಾಜ್ಯ ಸರ್ಕಾರ ಈ ಮೂರು ಶಿಫಾರಸ್ಸುಗಳಲ್ಲಿ ಯಾವುದೇ ಒಂದು ಅಂಶವನ್ನು ಪರಿಗಣನೆ ಮಾಡಿಲ್ಲ. 2016 ರಿಂದ 7304 ಜನ ನಿವೃತ್ತಿಯಾಗಿದ್ದಾರೆ. ಅವರಿಗೆ ಕೊಡಬೇಕಾಗಿದ್ದ ಇಡಗಂಟನ್ನು ಕೂಡಾ ಸರ್ಕಾರ ಪರಿಗಣನೆ ಮಾಡಿಲ್ಲ.

ಹೆಸರಿಗೆ ಮಾತ್ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯೆಂದು ಬಜೆಟ್‌ನ್ನು ಮಂಡಿಸಿ, ಮಹಿಳಾ ವಿರೋಧೀ ನೀತಿ ಅನುಸರಿಸಿ ರುವುದನ್ನು ನಾವು ಖಂಡಿಸುತ್ತೇವೆ. ಮಾತ್ರವಲ್ಲದೇ ನಮ್ಮ ಇಲಾಖೆಯ ಶಿಫಾರಸ್ಸುಗಳನ್ನು ಬಜೆಟ್ ಅಂತಿಮ ಗೊಳಿಸುವಾಗ ಸೇರ್ಪಡೆ ಮಾಡಬೇಕೆಂದೂ ಒತ್ತಾಯಿಸಿ ರಾಜ್ಯದ.ಎಲ್ಲಾ ತಾಲ್ಲೂಕುಗಳಲ್ಲಿ ಮಾರ್ಚ್ 15 ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಮಾಡಲು ಸಂಘಟನೆ ತೀರ್ಮಾನಕ್ಕೆ ಮುಂದಾಗಿದೆ ಎಂದರು.

ಇದೇ ವೇಳೆ ಶಿವ ಗಂಗಮ್ಮ, ಸುನಂದ ವಿ.ಆರ್.ರೇಣುಕಮ್ಮ, ಕೆ.ರತ್ನಮ್ಮ, ಅನಿತಾ, ಜಯ್ಯಮ್ಮ, ಯಶೋಧಮ್ಮ, ಪಾರ್ವತಮ್ಮ ಇತರೆ ನೂರಾರು ಮಂದಿ ಅಂಗನವಾಡಿ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *