Thursday, 19th September 2024

ಹುಳಿಯಾರಿನಲ್ಲಿ ಭಾರತ್ ಬಂದ್’ಗೆ ನೀರಸ ಪ್ರತಿಕ್ರಿಯೆ

ಹುಳಿಯರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಹುಳಿಯಾರು ಪಟ್ಟಣದಲ್ಲಿ ಯಾವುದೇ ಬೆಂಬಲ ದೊರೆಯದೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ವ್ಯಾಪಾರ-ವಹಿ ವಾಟು ಎಂದಿನಂತೆ ನಡೆಯಿತು. ಕೆಎಸ್‌ಆರ್ಟಿಸಿ ಹಾಗೂ ಖಾಸಗಿ ಬಸ್ ಸಂಚಾರ ಎಂದಿನಂತೆ ಇತ್ತು. ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿತು.

ಅಂಗಡಿ-ಮುಂಗಟ್ಟು ಗಳು, ಹೋಟಲ್‌ಗಳು ಎಂದಿನಂತೆ ತೆರೆದಿ ತ್ತು. ಒಟ್ಟಾರೆ ಬಂದ್ ‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಮುಂಚಿತವಾಗಿಯೇ ಬಂದ್ ಬಗ್ಗೆ ತಿಳಿದಿದ್ದರಿಂದ ಪ್ರಯಾಣಿಕರು ಕೂಡ ಹೆಚ್ಚಾಗಿ ಕಂಡು ಬರಲಿಲ್ಲ. ಪ್ರಯಾಣಿಕರ ಸಂಖ್ಯೆಯೂ ವಿರಳವಾಗಿದ್ದರಿಂದ ಬಸ್ ನಿಲ್ದಾಣದಲ್ಲಿ ಜನಸಂದಣೆ ಎಂದಿನಂತಿರಲಿಲ್ಲ. ಆಟೋಗಳು, ಲಾರಿಗಳು, ಮ್ಯಾಕ್ಸಿಕ್ಯಾಬ್‌ಗಳ ಓಡಾಟ ಸಹ ವಿರಳವಾಗಿತ್ತು.

ಹೊಸಹಳ್ಳಿ ಚಂದ್ರಣ್ಣ ಬಣದ ರಾಜ್ಯ ರೈತ ಸಂಘದ ರೈತರು ಪ್ರತಿಭಟನಾ ಮೆರವಣಿಗೆ ಮಾಡಿ ರಾಮಗೋಪಾಲ್ ಸರ್ಕಲ್ ಬಳಿ ಸಾಂಕೇತವಾಗಿ ಕೆಲಕಾಲ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ರೈತ ವಿರೋಧಿ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *