ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದ ಬಿಜೆಪಿಯ ಅಶೋಕ್ ಗಸ್ತಿಯವರು ವಿಧಿವಶರಾದರು.
ಅವರಿಗೆ 55 ವರ್ಷ ವಯಸ್ಸಾಗಿತ್ತು. ಅವರು ಹಲವು ವರ್ಷಗಳಿಂದ ಆರ್.ಎಸ್.ಎಸ್ ಸಂಘದ ಸಕ್ರಿಯ ಕಾರ್ಯಕರ್ತರು .
ತೀವ್ರ ಜ್ವರದಿಂದ ಬಳಲುತ್ತಿದ್ದು. ಸೆ.2ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಗಸ್ತಿಯವರು, ಕಳೆದ 15 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಸವಿತಾ ಸಮಾಜದ ಏಳಿಗೆಗಾಗಿ ಅವಿರತವಾಗಿ ಶ್ರಮಿಸಿದರು. ರಾಜ್ಯಸಭಾ ಸದಸ್ಯರಾಗಿ ಜುಲೈ 22ರಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಗಸ್ತಿ ಮೂಲತಃ ರಾಯಚೂರಿನ ಲಿಂಗಸಗೂರಿನವರು.