Friday, 25th October 2024

Brahmanda Guruji: ದೇಶ ಇಬ್ಭಾಗ, ರಾಜ್ಯ ಮೂರು ಭಾಗವಾಗಲಿದೆ: ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!

Brahmanda Guruji

ಹಾಸನ: ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಅವರು ರಾಜ್ಯ ಸೇರಿ ದೇಶ ಹಾಗೂ ಪ್ರಪಂಚದಲ್ಲಿ ನಡೆಯುವ ಬೆಳವಣಿಗೆಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಕರ್ನಾಟಕವು ಮೂರು ಭಾಗ ಆಗುವುದು ಶತಸಿದ್ಧ, ಶಿವನ ಮೇಲೆ ಆಣೆ ಮಾಡುತ್ತೇನೆ, ಇದು ಸತ್ಯವಾಗಲಿದೆ. ಕರ್ನಾಟಕ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕವಾಗಿ ರಾಜ್ಯವು ಮೂರು ಭಾಗ ಆಗಲಿದೆ. ಹಾಗೆಯೇ ಮೂವರು ಮುಖ್ಯಮಂತ್ರಿಗಳಾಗಲಿದ್ದಾರೆ ಎಂದು ಬ್ರಹ್ಮಾಂಡ ಗುರೂಜಿ (Brahmanda Guruji) ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಭಾರತ ದೇಶ ಮತ್ತೆ ಎರಡು ಭಾಗ ಆಗಲಿದೆ. ಇದರ ನಡುವೆ ಬಾಂಗ್ಲಾದೇಶ-ಚೀನಾ ಕುತಂತ್ರ ಮಾಡಿ ದೇಶದ ಮೇಲೆ ದಾಳಿ ಮಾಡಲಿವೆ. ನಮಗೆ ಅಮೆರಿಕದಿಂದಾಗಲಿ ಅಥವಾ ಬೇರೆ ಯಾವ ದೇಶದಿಂದಲೂ ಸಹಾಯ ಸಿಗುವುದಿಲ್ಲ. ರಷ್ಯಾವೊಂದೇ ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

2025 – 2026ಕ್ಕೆ ಮೂರನೇ ಮಹಾಯುದ್ಧ ನಡೆಯಲಿದ್ದು, 13 ಮುಸ್ಲಿಂ ರಾಷ್ಟ್ರಗಳು ಭಾರತದ ಮೇಲೆ ದಾಳಿ ಮಾಡಲಿವೆ. ಇನ್ನು ಪ್ರಧಾನಮಂತ್ರಿಗಳು ಎರಡು ವರ್ಷ ಅವಧಿಯಲ್ಲಿ ಕೇವಲ ಒಂದೂವರೆ ವರ್ಷ ಮಾತ್ರ ಪ್ರಧಾನಿಯಾಗಿ ಉಳಿಯುತ್ತಾರೆ. ಬಳಿಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆಶ್ರಮ ಸೇರಲಿದ್ದಾರೆ. ಈ ರಾಜಕೀಯ ಹೊಲಸು ಸರಿಮಾಡಲು ಪ್ರಧಾನಿ ಸಾಕಷ್ಟು ಪ್ರಯತ್ನ ನಡೆಸಿದರು. ಆದರೆ ಏನೂ ಬದಲಾವಣೆ ಆಗದ ಹಿನ್ನೆಲೆಯಲ್ಲಿ ಬೇಜಾರಾಗಿ ರಾಜೀನಾಮೆ ನೀಡಬಹುದು ಅಥವಾ ಬೇರೆಯವರನ್ನು ಆಯ್ಕೆ ಮಾಡಿಕೊಳ್ಳಬಹುದು. ಮುಂದೆ ಒಬ್ಬ ಸನ್ಯಾಸಿ ಜಗತ್ತನ್ನು ಆಳಲಿದ್ದಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Gyanvapi Case: ಜ್ಞಾನವಾಪಿ ಸಂಕೀರ್ಣದ ಹೆಚ್ಚುವರಿ ಸಮೀಕ್ಷೆಯ ಮನವಿ ತಿರಸ್ಕರಿಸಿದ ಕೋರ್ಟ್‌; ಹಿಂದೂಗಳಿಗೆ ಹಿನ್ನಡೆ