Wednesday, 23rd October 2024

ಶಾಲೆ ಆರಂಭದ ಬಗ್ಗೆ ಇಂದು ಚರ್ಚೆ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಕುರಿತಂತೆ, ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ  ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಸಚಿವರ ಸಮ್ಮುಖದಲ್ಲಿ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆಸುತ್ತೇವೆ. ಸಚಿವರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.