Sunday, 28th April 2024

ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖ್ಯಾತ ಸಂಗೀತ ದಿಗ್ಗಜ, ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆ ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು ಎಂದಿದ್ದಾರೆ.

ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿ ಯೊಂದು ಕಳಚಿದಂತಾಗಿದೆ ಎಂದು ದುಖ ವ್ಯಕ್ತ ಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!