Saturday, 27th July 2024

ಕೈ ಅಭ್ಯರ್ಥಿ ರಮೇಶ್ ಬಾಬು, ಜೆಡಿಎಸ್‌ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕೈ ಅಭ್ಯರ್ಥಿಯಾಗಿ ರಮೇಶ್ ಬಾಬು ಹಾಗೂ ಜೆಡಿಎಸ್‌ ಅಭ್ಯರ್ಥಿಯಾಗಿ ಚೌಡರೆಡ್ಡಿ ತೂಪಲ್ಲಿ ನಾಮಪತ್ರ ಸಲ್ಲಿಸಿದರು.

ಪಕ್ಷದ ನಾಯಕರ ಜೊತೆ ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ಇಬ್ಬರೂ ಉಮೇದುವಾರಿಕೆ ಸಲ್ಲಿಸಿದರು.

ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕರಾದ ಜಿ. ಪರಮೇಶ್ವರ, ಯು.ಟಿ. ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಇದ್ದರು.

ಚೌಡರೆಡ್ಡಿ ನಾಮಪತ್ರ ಸಲ್ಲಿಸುವ ವೇಳೆ ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರ ಸ್ವಾಮಿ, ಪಕ್ಷದ ನಾಯಕರಾದ ಬಸವರಾಜ ಹೊರಟ್ಟಿ, ಗೋವಿಂದರಾಜು ಇದ್ದರು.

Leave a Reply

Your email address will not be published. Required fields are marked *

error: Content is protected !!