Thursday, 19th September 2024

ಸಿಂಧನೂರಿನಲ್ಲಿ ಡಿ.ಕೆ ಶಿವಕುಮಾರ ಬರುವಿಗಾಗಿ ಕಾದು ಸುಸ್ತಾದ ಕಾರ್ಯಕರ್ತರು

ಸಿಂಧನೂರು:  ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರುವುದಾಗಿ ನೂರಾರು ಯುವ ಕಾರ್ಯಕರ್ತರು ಹಾಗೂ ಮಹಿಳಾ ಘಟಕ ಕಾಂಗ್ರೆಸ್ ಕಾರ್ಯಕರ್ತರು 3:00 ಗಂಟೆ ಕಾಲ ಕಾದರು ಬರೆದಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ನಿರಾಶೆ ಮೂಡಿರುವುದು ಕಂಡುಬಂತು.

ಮಸ್ಕಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಭಾಗವಹಿಸುವ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕಾದು ಕಾದು ಸುಸ್ತಾಗಿ ಕೊನೆಗೆ ನಿರಾಶೆ ಮೂಡಿಸಿದರು.

ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಬಸನಗೌಡ ಬಾದರ್ಲಿ ಶಿವಕುಮಾರ್ ಅವರಿಗೆ ಅದ್ದೂರಿ ಸ್ವಾಗತ ಏರ್ಪಡಿಸಿದ್ದರು.

ಆದರೆ ಬರದೆ ಇರದ ಕಾರಣ ಎಲ್ಲರಿಗೂ ನಿರಾಶವಾದ ವಾತಾವರಣ ಸೃಷ್ಟಿಯಾಯಿತು.

Leave a Reply

Your email address will not be published. Required fields are marked *