Thursday, 19th September 2024

ಗಾಲಿ ಜನಾರ್ಧನ ರೆಡ್ಡಿ ಕುಟುಂಬದ ಆಸ್ತಿ ಜಪ್ತಿಗೆ ಆದೇಶ

ಗಂಗಾವತಿ: ಗಂಗಾವತಿಯಿಂದ ಕೆಆರ್‌ಪಿಪಿ ಪಕ್ಷದಿಂದ ಸ್ಪರ್ಧೆಗಿಳಿದು ಗೆಲುವು ಸಾಧಿಸಿದ್ದ ಗಾಲಿ ಜನಾರ್ಧನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀಗೆ ಸಿಬಿಐ ವಿಶೇಷ ಕೋರ್ಟ್‌ ಶಾಕ್‌ ನೀಡಿದೆ.

ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಅರುಣಾ ಲಕ್ಷ್ಮೀ ರೆಡ್ಡಿ ಅವರ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಮುಟ್ಟುಗೋಲು ಹಾಕುವಂತೆ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದ್ದು, ಇದು ಬಳ್ಳಾರಿ ಗಣಿಧನಿ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿಗೆ ತಲೆನೋವಾಗಿ ಪರಿಣಮಿಸಿದೆ.

ಕ್ರಿಮಿನಲ್‌ ಕೇಸ್‌ ಮುಗಿಯುವವರೆಗೂ ಆಸ್ತಿ ಮುಟ್ಟುಗೋಲು ಹಾಕಲು ಆದೇಶ ಹೊರಡಿಸಿದೆ.