Friday, 20th September 2024

ರಂಗೇರಿದ ಉಪಚುನಾವಣೆ: ’ದಳ’ಕ್ಕೆ ಬಿಗ್ ಶಾಕ್

ಕುಂದಗೋಳ : ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆ ರಂಗೇರಿದ್ದು, ಇಂತಹ ಸಂದರ್ಭದಲ್ಲಿಯೇ ಜೆಡಿಎಸ್ ಗೆ ಬಿಗ್ ಶಾಕ್ ಉಂಟಾಗಿದೆ.

ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಎಸ್ ಅಕ್ಕಿ, ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಿದ್ದಾರೆ. ಇದರ ಬೆನ್ನಲ್ಲಿಯೇ ಅವರಿಗೆ ಬೆಂಬಲಿಸುತ್ತಿದ್ದಂತ 56 ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವ ಕುಮಾರ್ ಗೆ ಮನವಿ ಮಾಡಿದ್ದಾರೆ.

ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಕುಂದಗೋಳ ತಾಲೂಕು ಪಂಚಾಯ್ತಿ ಅಧ್ಯಕ್ಷರು ಸೇರಿದಂತೆ 56 ಜೆಡಿಎಸ್ ಕಾರ್ಯಕರ್ತರು, ನಮ್ಮ ನಾಯಕ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾ ರ್ಜುನ ಎಸ್ ಅಕ್ಕಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷವನ್ನು ಸೇರ್ಪಡೆಯಾಗಲು ಬಯಸಿದ್ದೇವೆ.

ಆದ ಕಾರಣ ಪಕ್ಷದ ಸದಸ್ಯತ್ವವನ್ನು ಕೊಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.