Saturday, 27th April 2024

ಎಂ.ಪಿ.ಲತಾ ಮಲ್ಲಿಕಾರ್ಜುನ, ಕವಿತಾ ರೆಡ್ಡಿ ನೇಮಕ

ಹರಪನಹಳ್ಳಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಗಾಂಧಿಯವರ ಅನುಮೋದನೆ ಮೇರೆಗೆ ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ದಾವಣಗೆರೆ ಜಿಲ್ಲೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹಾಗೂ ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಕವಿತಾ ರೆಡ್ಡಿಯವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆದೇಶಿಸಿದ್ದಾರೆ.

ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಮುಂಬರುವ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.

error: Content is protected !!