Saturday, 27th April 2024

ಮಹಾಜನ್ ಆಯೋಗ ವರದಿಯೇ ಅಂತಿಮ: ಪವಾರ್‌ ಹೇಳಿಕೆಗೆ ಬಿಎಸ್ವೈ ತಿರುಗೇಟು

ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಮಹಾಜನ್ ಆಯೋಗ ವರದಿಯೇ ಅಂತಿಮ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.

ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಗಡಿಭಾಗದ ಪ್ರದೇಶಗಳು ನಮ್ಮ ರಾಜ್ಯಕ್ಕೆ ಸೇರ್ಪಡೆಯಾಗಬೇಕೆಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿಗಳ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಬೆಳಗಾವಿ ಎಂದೆಂದೂ ರಾಜ್ಯದ ಅವಿಭಾಜ್ಯ ಅಂಗ. ಮಹಾಜನ್ ವರದಿಯೇ ಅಂತಿಮ ಎಂಬುದು ಜಗತ್ತಿಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು. ಅಜಿತ್ ಪವಾರ್ ಜನರನ್ನು ಪ್ರಚೋದನೆಗೊಳಿಸುವ ದುರದ್ದೇಶಪೂರ್ವದಿಂದಲೇ ಇಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಇದನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ತಿರುಗೇಟು ನೀಡಿದರು.

ನೀವು ಪದೇ ಪದೇ ಗಡಿ ವಿವಾದ ತೆಗೆದರೆ ನಾವು ಮಹಾಜನ್ ಆಯೋಗದ ವರದಿಯನ್ನು ಜಗತ್ತಿಗೇ ತಿಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

Leave a Reply

Your email address will not be published. Required fields are marked *

error: Content is protected !!