Friday, 20th September 2024

ಪ್ರವಾಸಕ್ಕೆಂದು ಬಂದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಸಾವು

ಕಾರವಾರ: ಕರ್ನಾಟಕದ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದಾಗ ಬಿರಂಪಾಲಿ- ಅಕೋರ್ಡಾ ಎಂಬಲ್ಲಿ ಛತ್ತೀಸ್​​ಗಢದ  ಯುವತಿ ಮೃತಪಟ್ಟಿದ್ದಾಳೆ.

ಛತ್ತಿಸಗಢದ ದೇವಿಕಾ ಸಂಜಯ್ ವಾಸವಣೆ (25) ಮೃತ ಯುವತಿ. ಸೈಕ್ಲಿಂಗ್ ಮಾಡುವಾಗ ಆಯತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಈ ವೇಳೆ ತಲೆಯ ಭಾಗಕ್ಕೆ ಪೆಟ್ಟಾಗಿ ಮೂಗಿನಿಂದ ರಕ್ತ ಸ್ರಾವವಾಗಿದ್ದು, ಯುವತಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಹಿಡನ್ ವ್ಯಾಲಿ ಹೋಮ್ ಸ್ಟೇನಲ್ಲಿ ಸ್ನೇಹಿತರ ಜತೆ ದೇವಿಕಾ ತಂಗಿದ್ದರು. ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ದೇವಿಕಾ ಧಾರವಾಡಕ್ಕೆ ಸೆಮಿನಾರ್‌ಗಾಗಿ ಬಂದಿದ್ದರು. ರಜಾ ದಿನದ ಕಾರಣ ಧಾರವಾಡದಿಂದ ದಾಂಡೇಲಿಗೆ ಪ್ರವಾಸಕ್ಕೆ ಆಗಮಿಸಿದ್ದರು. ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ದಾಂಡೇಲಿ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಯುವತಿಯ ಮರಣೋತ್ತರ ಪರೀಕ್ಷೆ ನಡೆದಿದೆ.