ಬೆಂಗಳೂರು:ಸಿಬಿಐ ದಾಳಿ ನಡೆದದ್ದಕ್ಕೆ ನನಗೆ ಬೇಸರವಿಲ್ಲ. ಇದೆಲ್ಲವೂ ರಾಜಕೀಯ ಷಡ್ಯಂತ್ರ. ಬೈಎಲೆಕ್ಷನ್ ಇದೆ ಎಂದು ನನ್ನನ್ನ ಟಾರ್ಗೆಟ್ ಮಾಡಿದ್ದಾರೆ. ಎಲ್ಲವನ್ನೂ ನೋಡಿದ್ದೀನಿ, ಇದು ಒಂದು ಭಾಗ. ನನ್ನ ಸ್ಟಾಫ್, ಪಿಎ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀಗಳ ಬಳಿ ಡಿ.ಕೆ.ಶಿವ ಕುಮಾರ್ ಆರೋಪಿಸಿದ್ದಾರೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸೋಮವಾರ ಸಿಬಿಐ ದಾಳಿ ಬೆನ್ನಲ್ಲೆ ಮಂಗಳವಾರ ನಂಜಾವಧೂತ ಶ್ರೀಗಳು ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಯಾಗಿ ಧೈರ್ಯ ತುಂಬಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ನಂಜಾವಧೂತ ಶ್ರೀಗಳು, ಡಿ.ಕೆ ಶಿವಕುಮಾರ್ ಬಳಿ ಚರ್ಚಿಸಿದರು. ಈ ವೇಳೆ ಡಿ.ಕೆ ಶಿವಕುಮಾರ್ ನಂಜಾವಧೂತ ಶ್ರೀಗಳ ಬಳಿ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ಸಿಬಿಐ ದಾಳಿ ನಡೆದದ್ದಕ್ಕೆ ಬೇಸರವಿಲ್ಲ. ಆದರೆ ಮಗಳ ಮದುವೆಗೆ ತಂದ ಚಿನ್ನವನ್ನ ಜಪ್ತಿ ಮಾಡಿದ್ದಾರೆ. ನನ್ನ ಮಗಳ ಮದುವೆಗಾಗಿ ಖರೀದಿಸಿಟ್ಟಿದ್ದ ಚಿನ್ನಾಭರಣಗಳನ್ನೂ ಸೀಜ್ ಮಾಡಿ ತೆಗೆದುಕೊಂಡು ಹೋಗಿರುವುದು ಬೇಸರ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.