ಬೆಂಗಳೂರು: ಡ್ರಗ್ಸ್ ದಂಧೆ ವಿಚಾರದಲ್ಲಿ ಪ್ರಭಾವಿಗಳ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ರಾಜ್ಯ ಸರ್ಕಾರ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳುತ್ತೆೆ ಎಂದು ಹೇಳಿದರು.
ಯಾವುದೇ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯಲ್ಲ. ನಮ್ಮ ಶಕ್ತಿ ಮೀರಿ ಕ್ರಮ ತೆಗೆದುಕೊಳ್ಳಲು ಬದ್ದರಾಗಿದ್ದೇವೆ. ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ.
ರಾಜ್ಯಾದ್ಯಂತ ಎಲ್ಲಾ ಕಡೆ ರೇಡ್ ಮಾಡಿದ್ದೇವೆ.
ಆಳವಾಗಿ ಬೇರೂರಿದ ಮಾದಕ ವಸ್ತು ಜಾಲ ಭೇದಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.