Sunday, 28th April 2024

ಪಾವಗಡ ಬಿಜೆಪಿ ಮಂಡಲದಿಂದ ನರೇಂದ್ರ ಮೋದಿಯವರಿಗೆ ಕೃತಜ್ಞತೆ

ಎಸ್ಬಿ ಸಮುದಾಯ ಗುರುತಿಸಿ ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆ ಯಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಶ್ರೀಮತಿ ಹೇಮಲತ ನಾಯಕ್

ಪಾವಗಡ: ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ಗುರುತಿಸಿ ವಿಧಾನಪರಿಷತ್ ಸದಸ್ಯರಾಗಿ ಅವಿರೋಧ ಆಯ್ಕೆ ಮಾಡಿರುವುದಕ್ಕೆ ಪಾವಗಡ ಬಿಜೆಪಿ ಘಟಕದಿಂದ ಅಭಿನಂದನೆಗಳು.

ಪಾವಗಡ ಬಿಜೆಪಿ ಮಂಡಲದಿಂದ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರನ್ನು ಅಭಿನಂದಿಸಿದ್ದಾರೆ.

ಇದೇ ವೇಳೆ ಜಿಲ್ಲಾ ಬಿಜೆಪಿ ಕಾರ್ಯಕರಣಿ ಸದಸ್ಯ ರಾದ ಕೃಷ್ಣ ನಾಯ್ಕ್ ರವರು ಮಾತನಾಡಿ ಪ್ರಧಾನಿ ಮೋದಿ ಅವರು ಪರಿಶಿಷ್ಟ ಜಾತಿ ವರ್ಗದ ಜನರು ಮುಂದೆಬರಲು ಅನೇಕ ಯೋಜನೆ, ಅವಕಾಶಗಳನ್ನು ಕಲ್ಪಿಸುತ್ತಿದ್ದು, ಅಂಬೇಡ್ಕರರ ನೆನಪುಳಿಯುವಂತೆ ಮಾಡಲು ಪಂಚರತ ಯೋಜನೆ, ಮುದ್ರಾ ಯೋಜನೆ ಜಾರಿಗೊಳಿಸಿದ್ದ ಸಂಸದ ನಾರಾಯಣಸ್ವಾಮಿ ಅವರಿಗೆ ಕೇಂದ್ರ ಮಂತ್ರಿ ಮಾಡಿದ್ದಾರೆ, ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಿಎಂ ಆಗಿದ್ದ ಯಡಿಯೂರಪ್ಪ ಅವರು ಸಹ ಸಮುದಾಯಕ್ಕೆ ಹೆಚ್ಚಿನ ಅನುಕೂಲತೆ ಕಲ್ಪಿಸುತ್ತಿದೆ. ಬಿಜೆಪಿ ಪರಿಶಿಷ್ಟ ಜನಾಂಗಕ್ಕೆ ಸಾಮಾಜಿಕ ನ್ಯಾಯ ಕೊಡುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾವಗಡ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ರಾಜೇಂದ್ರ. ತಾಲೂಕು ಬಿಜೆಪಿ ಅಧ್ಯಕ್ಷ ರವಿಶಂಕರ್ ನಾಯ್ಕ್.ತುಮಕೂರು ಜಿಲ್ಲಾ ಕಾರ್ಯಕರಣಿ ಸದಸ್ಯ ಕೃಷ್ಣನಾಯ್ಕ್.ಬಿಜೆಪಿ ಹಿರಿಯ ಮುಖಂಡ ಡಾ.ವೆಂಕಟರಾಮಯ್ಯ.ಅಶೋಕ. ರವಿ.ಅಲ್ಪಸಂಖ್ಯಾತ ಅಧ್ಯಕ್ಷ ನೂರ್ ಮಹಮದ್ ಇದ್ದರು.

 

error: Content is protected !!