Saturday, 26th October 2024

Pradeep Eshwar: ಜಿರಂಜೀವಿ ಬ್ಲಡ್‌ ಬ್ಯಾಂಕ್‌ನಲ್ಲಿ ರಕ್ತದಾನ ಮಾಡಿದ ಶಾಸಕ ಪ್ರದೀಪ್‌ ಈಶ್ವರ್‌; ಮೆಗಾಸ್ಟಾರ್‌ ಮೆಚ್ಚುಗೆ

ಬೆಂಗಳೂರು: ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಅವರು ಮೆಗಾಸ್ಟಾರ್‌ ಚಿರಂಜೀವಿ ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಚಿರಂಜೀವಿ ಚಾರಿಟಬಲ್‌ ಟ್ರಸ್ಟ್‌ನ ಬ್ಲಡ್‌ ಬ್ಯಾಂಕ್‌ನಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ರಕ್ತದಾನ ಮಾಡಿದ್ದು, ಇದಕ್ಕಾಗಿ ಚಿರಂಜೀವಿ ಅವರು ವಿಶೇಷವಾಗಿ ಅಭಿನಂದಿಸಿದ್ದಾರೆ.

ಹೈದರಾಬಾದ್‌ನಲ್ಲಿ ಚಿರಂಜೀವಿ ಅವರನ್ನು ಭೇಟಿಯಾಗುವ ಮೊದಲು ಚಿರಂಜೀವಿ ಚಾರಿಟಬಲ್‌ ಟ್ರಸ್ಟ್‌ನ ಬ್ಲಡ್‌ ಬ್ಯಾಂಕ್‌ನಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಹಾಗೂ ಅವರ ಸಂಬಂಧಿ ರಮೇಶ್‌ ಬಾಬು ರಕ್ತದಾನ ಮಾಡಿದ್ದಾರೆ. ನಂತರ ಹೈದರಾಬಾದ್‌ನಲ್ಲಿರುವ ಚಿರಂಜೀವಿ ಅವರ ಮನೆಗೆ ನೀಡಿ ಮೆಗಾಸ್ಟಾರ್‌ ಜತೆ ಮಾತುಕತೆ ನಡೆಸಿದರು. ಈ ವೇಳೆ ರಕ್ತದಾನ ಮಾಡುವ ಮೂಲಕ ಜನರಿಗೆ ಸ್ಫೂರ್ತಿಯಾದ ಶಾಸಕರ ಕಾರ್ಯಕ್ಕೆ ಚಿರಂಜೀವಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಟ ಚಿರಂಜೀವಿ ಅವರು ಸದ್ಯ ವಸಿಷ್ಠ ನಿರ್ದೇಶನದ ವಿಶ್ವಂಭರಂ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಯುವಿ ಕ್ರಿಯೇಷನ್ಸ್‌ ಬ್ಯಾನರ್‌ನಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, ತ್ರಿಷಾ ಮತ್ತು ಆಶಿಕಾ ರಂಗನಾಥ್‌ ನಾಯಕಿಯರಾಗಿ ನಟಿಸುತ್ತಿದ್ದಾರೆ. ಇದು ಸೋಷಿಯೋ ಫ್ಯಾಂಟಸಿ ಸಿನಿಮಾ ಎಂದು ಹೇಳಲಾಗಿದೆ. ದಸರಾ ಹಬ್ಬದ ಸಮಯದಲ್ಲಿ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ.