ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪ್ರವೀಣ್ ಪೀಟರ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
ಶಾಂತಿನಗರದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್, ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯ ಮೇಲಿನ ದಾಳಿಯ ಶಾಕ್ನಿಂದ ಕಾಂಗ್ರೆಸ್ ನಾಯಕರು ಇನ್ನೂ ಹೊರ ಬಂದಿಲ್ಲ. ಹಾಗಾಗಿ, ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲಿಲ್ಲ.
ಬೆಂಗಳೂರು ಶಿಕ್ಷಕ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಸದಸ್ಯ ಪುಟ್ಟಣ್ಣ ಅಭ್ಯರ್ಥಿಯಾಗಿದ್ದಾರೆ. ಕಳೆದ ಬಾರಿ ಜೆಡಿಎಸ್ನಿಂದ ಆಯ್ಕೆ ಯಾಗಿದ್ದ ಪುಟ್ಣಣ್ಣ ಈ ಬಾರಿ ಬಿಜೆಪಿ ಸೇರಿ ಅಭ್ಯರ್ಥಿಯಾಗಿ ದ್ದಾರೆ.
ಜೆಡಿಎಸ್ನಿಂದ ವಕೀಲ ಎ.ಪಿ.ರಂಗನಾಥ್ ಕಣಕ್ಕಿಳಿದಿ ದ್ದಾರೆ. ಮೂರು ಪಕ್ಷಗಳಿಗೂ ವಿಧಾನ ಪರಿಷತ್ ಚುನಾವಣೆ ಜಿದ್ದಾಜಿದ್ದಿನ ಕಣವಾಗಿದೆ.