Thursday, 19th September 2024

ಕೃಷಿ ವಿಶ್ವವಿದ್ಯಾಲಯಗಳ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಕೃಷಿ ವಿಶ್ವವಿದ್ಯಾಲಯಗಳ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ.

ನೂತನವಾಗಿ 7 ಹೊಸ ಕೃಷಿ ವಿಶ್ವವಿದ್ಯಾಲಯಗಳನ್ನು ವಿವಿಧ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುತ್ತಿದೆ. ಈ ಮೂಲಕ ರೈತರ ಕೃಷಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಕೃಷಿ ಸಂಶೋಧನೆಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದ ರೈತರ ಅಭಿವೃದ್ಧಿಗಾಗಿ ರೈತ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕಾಗಿ 500 ಕೋಟಿ ಅನುದಾನ ಮೀಸಲಿಡಲಾಗಿದೆ. ಎರಡನೇ ಕೃಷಿ ನಿರ್ದೇಶನಲಾಯ ಸ್ಥಾಪಿಸಲಾಗಿದೆ. ರಾಜ್ಯದ ಕೆರೆಳಗ ಅಭಿವೃದ್ಧಿಗೆ 500 ಕೋಟಿ ಅನುದಾನ ನೀಡಲಾಗುತ್ತದೆ ಎಂದರು.

ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮಿನಿ ಆಹಾರ ಪಾರ್ಕ್ ರಾಜ್ಯದ ಎಲ್ಲೆಡೆ ನಿರ್ಮಾಣ ಮಾಡಲಾಗುತ್ತಿದೆ. ತಲಾ ಒಂದು ಸಾವಿರ ಎಕರೆಯಲ್ಲಿ ಕೃಷಿ ಇಲಾಖೆ ವ್ಯಾಪ್ತಿಯಲ್ಲಿ ನೈಸರ್ಗಿಕ ಕೃಷಿಗೆ ಒತ್ತು ನೀಡಲಾಗುತ್ತದೆ. ಸಾವಯವ ಉತ್ಪನ್ನದಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ. 642 ಕೋಟಿ ರೂ ವೆಚ್ಚದಲ್ಲಿ ಪ್ರಧಾನ ಕೃಷಿ ಸಿಂಚನ ಯೋಜನೆ ಜಾರಿಗೊಳಿಸಲಾಗುತ್ತದೆ. 2ನೇ ಘಟಕ ಯೋಜನೆ ಜಾರಿಗೆ ತರಲಾಗುತ್ತದೆ ಎಂದರು. ಕೊಡಗು, ಕೊಪ್ಪಳದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತದೆ.