Monday, 16th September 2024

ಹಂಪಿಗೆ ಭೇಟಿ ನೀಡಿದ ಯದುವೀರ ದಂಪತಿ

ಹೊಸಪೇಟೆ: ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಅವರು ಸೋಮವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು.

ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಬಂದು ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಿದರು.

ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ, ಕಲ್ಲಿನ ರಥ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಅವರು ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಆಂಜನೇಯನ ದರ್ಶನ ಪಡೆದರು.