ಬೆಂಗಳೂರು: ನಾನು ಕೊಲಂಬೋಗೆ ಹೋಗಿದ್ದು ನಿಜ. ಯಾಕೆ ಹೋಗ್ಬಾರ್ದು ಎಂಬುದಾಗಿ ಪ್ರಶ್ನೆ ಮಾಡಿದ್ದಾರೆ. ಈ ಹೇಳಿಕೆ ಮೂಲಕ ಶಾಸಕ ಜಮೀರ್ ಅಹ್ಮದ್ ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಶಾಸಕ ಜಮೀರ್ ಅಹ್ಮದ್, ಕೊಲಂಬೋಗೆ ಭೇಟಿ ನೀಡಿದ್ದೆ. ಮಾಜಿ ಸಿಎಂ ಕುಮಾರಸ್ವಾಮಿ ಜೊತೆಗೆ ಹೋಗಿದ್ದೆ. ಒಂದೂವರೆ ವರ್ಷಕ್ಕೊಮ್ಮೆ ಕೊಲಂಬೋಗೆ ಹೋಗ್ತಾ ಇರುತ್ತೇನೆ ಎಂಬುದಾಗಿ ಹೇಳುವ ಮೂಲಕ ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದ್ದಾರೆ.
ಕೊಲಂಬೋಗೆ ತೆರಳಿದ್ದರು ಎಂಬ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಮಾತಿಗೆ ಶಾಸಕ ಜಮೀರ್ ಅಹ್ಮದ್ ಉಲ್ಟಾ ಹೊಡೆದಿದ್ದರು. ನನ್ನ ಮೇಲಿನ ಆರೋಪ ಸಾಭೀತಾದ್ರೇ ನನ್ನ ಇಡೀ ಆಸ್ತಿಯನ್ನು ಸರ್ಕಾರಕ್ಕೆ ಬರೆದುಕೊಡುವುದಾಗಿಯೂ ಸವಾಲ್ ಹಾಕಿದ್ದರು.