Thursday, 19th September 2024

ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಬಿಎಂಟಿಸಿ ಬಸ್ಸು ಡಿಕ್ಕಿ: ಸವಾರ ಸಾವು

ಬೆಂಗಳೂರು: ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಬಿಎಂಟಿಸಿ ಬಸ್ಸು ಡಿಕ್ಕಿಯಾಗಿ ಬೈಕ್ ಸವಾರ ಪ್ರಮೋದ್ ಎನ್ನುವವರ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರು ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೊನೆಗೆ ಚಾಲಕನನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಹೊಯ್ಸಳ ಸಿಬ್ಬಂದಿ ಕರೆದೊಯ್ದರು. ಬಿಎಂಟಿಸಿ ಬಸ್ಸನ್ನು ಜಪ್ತಿ ಮಾಡಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದೆ ಓದಿ

ಬಿಎಂಟಿಸಿ ಬಸ್ ಗಳಲ್ಲಿ ವಿಶೇಷ ಚೇತನರಿಗಾಗಿ ಸೌಲಭ್ಯ ಶೀಘ್ರ..!

ಬೆಂಗಳೂರು: ಬೆಂಗಳೂರಿನಲ್ಲಿ ವಿಶೇಷಚೇತನರು ಇನ್ನು ಮುಂದೆ ಬಿಎಂಟಿಸಿ ಬಸ್ ಗಳಲ್ಲಿ ಯಾರ ಸಹಾಯವಿಲ್ಲದೇ ಓಡಾಡಬಹುದಾಗಿದೆ. ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಿಶೇಷ ಚೇತನರಿಗೆ ಪ್ರಯಾಣ...

ಮುಂದೆ ಓದಿ