ಗದಗ: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಬಸವರಾಜ ಗುರಿಕಾರ ರವರು ಭಾನುವಾರ ಗದಗ ಜಿಲ್ಲೆಯ ಗಜೇಂದ್ರಗಡ, ರೋಣ, ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನಲ್ಲಿ ಪ್ರಚಾರ ಕಾರ್ಯ ಮಾಡಿದರು. ಈ ಸಂಧರ್ಭದಲ್ಲಿ ಪದವೀಧರರು ತಮ್ಮ ಅಳಲನ್ನು ತೋಡಿಕೊಂಡರು. ಗುರಿಕಾರ ರವರು ಪದವೀಧರರ ಸಂಕಷ್ಟಕ್ಕೆ ಸ್ಪಂದಿಸಿ ಮಾತನಾಡುತ್ತ ನಾನು ನಿಮ್ಮೊಂದಿಗೆ ಇದ್ದೇನೆ. ಎಲ್ಲ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಗದಗನ ಜೆ.ಟಿ ಕಾಲೇಜು, ಪುಟ್ಟರಾಜ ಗವಾಯಿಗಳ ಮಹಾವಿದ್ಯಾಲಯ ಸಂಗೀತ ಕಾಲೇಜು, ಸರಕಾರಿ ಪದವಿ ಕಾಲೇಜು, ಅಬ್ದಲ್ […]