Monday, 16th September 2024

ಅರ್ಚಕರ ಗುಂಪಿನಲ್ಲಿ ಗಲಾಟೆ: ಮೂವರಿಗೆ ಗಾಯ

ಚಾಮರಾಜನಗರ: ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಗಲಾಟೆ ನಡೆದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾತ್ರಸ್ಥಳ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆದಿದೆ. ಚಿಕ್ಕಲೂರು ದೇವಸ್ಥಾನದ ಅರ್ಚಕರಾದ ಶಂಕರಪ್ಪ(65), ಶಿವಕುಮಾರಸ್ವಾಮಿ(40) ಹಾಗೂ ನಂಜುಂಡಸ್ವಾಮಿ(32) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ಪಡೆಯಲು ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದು, ದೀಕ್ಷೆ ಕೊಡಲು ಒಂದು ಗುಂಪು ದೇಗುಲದ ಹೊರಗೆ ತಯಾರಿ ಮಾಡಿಕೊಳ್ಳುವಾಗ ಈ ವೇಳೆ ಮತ್ತೊಂದು ಗುಂಪು ದೀಕ್ಷೆ ನಾವು ಕೊಡುತ್ತೇವೆ […]

ಮುಂದೆ ಓದಿ